Home ದಾವಣಗೆರೆ ಅರ್ಹರಿಗೆ ಮಾತ್ರ ಸಿಗಲಿದೆ ₹2,000: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ ಸರ್ಕಾರ, ಅನರ್ಹರನ್ನು ಹೊರದಬ್ಬಲು ಹೊಸ ತಂತ್ರಜ್ಞಾನ!
ದಾವಣಗೆರೆನವದೆಹಲಿಬೆಂಗಳೂರು

ಅರ್ಹರಿಗೆ ಮಾತ್ರ ಸಿಗಲಿದೆ ₹2,000: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ ಸರ್ಕಾರ, ಅನರ್ಹರನ್ನು ಹೊರದಬ್ಬಲು ಹೊಸ ತಂತ್ರಜ್ಞಾನ!

Share
ಗೃಹಲಕ್ಷ್ಮಿ
Share

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಫೇಶಿಯಲ್ ಅಥೆಂಟಿಕೇಷನ್ (ಮುಖ ಗುರುತಿಸುವಿಕೆ) ತಂತ್ರಜ್ಞಾನವನ್ನು ಅಳವಡಿಸಲು ಸರ್ಕಾರ ಮುಂದಾಗಿದೆ. ಈ ಹೊಸ ವ್ಯವಸ್ಥೆಯ ಅನುಷ್ಠಾನಕ್ಕಾಗಿ ಒಟ್ಟು 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಇತ್ತೀಚಿನ ಎಜಿಎ (AGA) ವರದಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿರುವ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಯೋಜನೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಂಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕ್ಷೇತ್ರ ಮಟ್ಟದಲ್ಲಿ ಹೇಗೆ ಕೆಲಸ ಮಾಡಬೇಕು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಈಗಾಗಲೇ ಸೂಕ್ತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಇದರೊಂದಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳು ಹಾಗೂ ದೂರವಾಣಿ ಸಂಖ್ಯೆಗಳು ಕಡ್ಡಾಯವಾಗಿ ಲಿಂಕ್ ಆಗಿರಬೇಕು ಎಂದು ಸೂಚಿಸಲಾಗಿದೆ.

“ನಮಗೆ ಈ ಯೋಜನೆಯಿಂದ ಯಾರನ್ನೂ ಕಡಿತಗೊಳಿಸುವ ಅಥವಾ ಕಿತ್ತುಹಾಕುವ ಉದ್ದೇಶವಿಲ್ಲ. ಆದರೆ ಸರ್ಕಾರದ ಕೋಟ್ಯಂತರ ರೂಪಾಯಿ ಹಣ ಯಾವುದೇ ಕಾರಣಕ್ಕೂ ಅನರ್ಹರ ಪಾಲಾಗಬಾರದು. ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಲಾಭ ತಲುಪಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles