• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕಾಂಗ್ರೆಸ್ ಸರ್ಕಾರದ ಹೊಣೆಗೇಡಿತನದಿಂದ 11 ಜೀವಗಳು ಬಲಿ: ಸಿಎಂಗೆ ಬರೆದ ಪತ್ರದಲ್ಲಿ ಬಿ.ವೈ. ವಿಜಯೇಂದ್ರ ಆಕ್ರೋಶ!

Editor by Editor
June 10, 2025
in ದಾವಣಗೆರೆ, ನವದೆಹಲಿ, ಬೆಂಗಳೂರು
0
ಕಾಂಗ್ರೆಸ್ ಸರ್ಕಾರದ ಹೊಣೆಗೇಡಿತನದಿಂದ 11 ಜೀವಗಳು ಬಲಿ: ಸಿಎಂಗೆ ಬರೆದ ಪತ್ರದಲ್ಲಿ ಬಿ.ವೈ. ವಿಜಯೇಂದ್ರ ಆಕ್ರೋಶ!

SUDDIKSHANA KANNADA NEWS/ DAVANAGERE/ DATE-10-06-2025

ಬೆಂಗಳೂರು: ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ, ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ವಿಜಯೇಂದ್ರ ಅವರು, ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ ಎಂದು ಹೇಳಿದ್ದಾರೆ.

ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ. ಸಾವಿಗೀಡಾದ ಹನ್ನೊಂದು ಜನರ ಪೈಕಿ ಮನೋಜ್ ಎಂಬ ಯುವಕನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದ ಆತನ ಅಜ್ಜಿ ಆಹಾರ ತ್ಯಜಿಸಿ ಪ್ರಾಣ ಬಿಟ್ಟಿರುವ ಸುದ್ದಿ ನೋವು ತರಿಸಿದೆ. ದುರಂತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬ ಯಾವ ಪರಿಯಲ್ಲಿ ರೋದಿಸುತ್ತಿದೆ ಎಂಬುದನ್ನು ಮೃತ ದೇವೀರಮ್ಮನವರ ಸಾವು ಸಾಕ್ಷೀಕರಿಸುತ್ತಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ಮುಖ್ಯಮಂತ್ರಿಗಳ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬಹಿರಂಗ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

Next Post
ಪ್ರಿಯಕರನ ಜೊತೆ ಸೋನಂ ರಘುವಂಶಿ ವಾಟ್ಸಪ್ ಚಾಟ್ ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಪ್ರಿಯಕರನ ಜೊತೆ ಸೋನಂ ರಘುವಂಶಿ ವಾಟ್ಸಪ್ ಚಾಟ್ ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In