• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 23, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶಕ್ಕೆ ಸಿಂಗಾರಗೊಂಡ ಬೆಣ್ಣೆನಗರಿ ದಾವಣಗೆರೆ

Editor by Editor
February 2, 2024
in ದಾವಣಗೆರೆ
0
38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶಕ್ಕೆ ಸಿಂಗಾರಗೊಂಡ ಬೆಣ್ಣೆನಗರಿ ದಾವಣಗೆರೆ

SUDDIKSHANA KANNADA NEWS/ DAVANAGERE/ DATE:02-02-2024

ದಾವಣಗೆರೆ: ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂದಿರದಲ್ಲಿ ಫೆ.3 ಮತ್ತು 4 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬೆಣ್ಣೆನಗರಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ದಾವಣಗೆರೆ ಜಿಲ್ಲೆಯಾಗಿ 31 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಈಗಾಗಕೇ ಎಲ್ಲಾ ಸಿದ್ದತೆ ಪೂರ್ಣಗೊಂಡಿದ್ದು, ಆಕರ್ಷಕ ವೇದಿಕೆ, ಕಲ್ಯಾಣ ಮಂಟಪದ ಮುಂಭಾಗದಲ್ಲಿ ವರ್ಣರಂಜಿತ ಸೀರೆಗಳಿಂದ ಸಿಂಗಾರ ಮಾಡಲಾಗಿದೆ.

ಛಾಯಾಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ವ್ಯಂಗ್ಯಚಿತ್ರ ಪ್ರದರ್ಶನಕ್ಜೆ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ 20  ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಎಸ್ಪಿ ಉಮಾ ಪ್ರಶಾಂತ್, ಡಿಸಿ ಡಾ.ಎಂ.ವಿ.ವೆಂಕಟೇಶ್ ಭೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುವ ಹಿನ್ನೆಲೆಯಲ್ಲಿ ಎಸ್ಪಿ ಉಮಾ ಪ್ರಶಾಂತ್, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವುದರಿಂದ ಯಾವುದೇ ಸಮಸ್ಯೆಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ಸೂಚಿಸಿದ ಅವರು,  ಸಮ್ಮೇಳನ 31 ವರ್ಷಗಳ ಬಳಿಕ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ಎಲ್ಲರೂ ಯಶಸ್ವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಎಸ್ಪಿ ಉಮಾ ಪ್ರಶಾಂತ್ ಮಾತನಾಡಿ, ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದರಿಂದ ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗೆ ,500  ಜನ ಪೊಲೀಸ್ ಸಿಬ್ಬಂದಿ, 100 ಜನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮ ನಡೆಯುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂದಿರದ ಹೊರಗಡೆ ಮತ್ತು ಒಳಗಡೆ ಒಂದು ಡಿವೈಎಸ್ಪಿ, 4 ಜನ ಸಿಪಿಐ, 19 ಜನ ಪಿಎಸ್ಐ,  19 ಜನ ಎಎಸ್ಐ,94 ಜನ ಎಚ್.ಸಿ, 31 ಜನ ಮಹಿಳಾ ಎಚ್ ಸಿ ಸೇರಿದಂತೆ ಒಟ್ಟು 168 ಜನ ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ‌ ಎಂದು ಮಾಹಿತಿ ನೀಡಿದರು.

ವಾಹನ ನಿಲುಗಡೆಗೆ ವ್ಯವಸ್ಥೆ

ರಾಜ್ಯದಿಂದ ಆಗಮಿಸುವ ಪ್ರತಿನಿಧಿಗಳ ವಾಹನಗಳನ್ನು ನಿಲುಗಡೆಗೆ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂದಿರದ ಮುಂಭಾಗದಲ್ಲಿರುವ ಖಾಲಿ ಜಾಗ ಮತ್ತು ಐಟಿಐ ಕಾಲೇಜು ಆವರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗಾಗಿ ರಾಜ್ಯದಿಂದ ಆಗಮಿಸುವ ಪ್ರತಿನಿಧಿಗಳು ವಾಹಗಳ ನಿಲುಗಡೆಗೆ ವ್ಯವಸ್ಥೆ ಮಾಡಿರುವ ಜಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ  ಬಸವರಾಜ್, ಮಲ್ಲೇಶ್ ದೊಡ್ಡಮನಿ, ಸಿಪಿಐಗಳಾದ ಸುನೀಲ್ ಕುಮಾರ್, ಸುರೇಶ್ ಸಗರಿ, ನಾಗರಾಜ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಏಕಬೋಟೆ, ಉಪಾಧ್ಯಕ್ಷ ಎಚ್.ಎನ್.ಪ್ರಕಾಶ್,  ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಖಜಾಂಚಿ ಎನ್.ವಿ..ಬದರಿನಾಥ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ, ದಾವಣಗೆರೆ ವರದಿಗಾರರ ಕೂದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ  ಸಿ.ವರದರಾಜ್, ಕಾರ್ಯದರ್ಶಿ ಎ.ಎನ್.ನಿಂಗಪ್ಪ, ಖಜಾಂಚಿ ಮಧುನಾಗರಾಜ್, ಪ್ರಚಾರ ಸಮಿತಿಯ ನಿರ್ವಾಹಕರಾದ ರಂಗನಾಥ್, ಹೆಚ್ ಎಂ ಪಿ ಕುಮಾರ್ ಸೇರಿದಂತೆ ಹಿರಿಯ ಪತ್ರಕರ್ತರು, ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

Next Post
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ಹೇಗೆ ಎಂದು ತಿಳಿಯಿರಿ….

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ಹೇಗೆ ಎಂದು ತಿಳಿಯಿರಿ....

Leave a Reply Cancel reply

Your email address will not be published. Required fields are marked *

Recent Posts

  • ತಂದೆ ಕೊಲೆಗೆ ಭೂಗತ ಪಾತಕಿಗಳಿಗೆ ಸುಫಾರಿ ಕೊಟ್ಟರಾ ಚೈತ್ರಾ ಕುಂದಾಪುರ? ಈಗೆಲ್ಲಿದ್ದಾರೆ ಬಿಗ್ ಬಾಸ್ ಮಾಜಿ ಸ್ಪರ್ಧಿ?
  • ಕಿರುಕುಳ ಆರೋಪ: ಯುವಕನಿಗೆ ಥಳಿಸಿ ಬಸ್ಕಿ ಹೊಡೆಸಿ ಮೂತ್ರ ಕುಡಿಸಿ ಗ್ರಾಮದ ತುಂಬೆಲ್ಲಾ ಮೆರವಣಿಗೆ!
  • “ಅಸಿಮ್ ಮುನೀರ್ ಗೆ ರಾಜ ಬಿರುದು ಸೂಕ್ತ, ಪಾಕಿಸ್ತಾನ ಕಾಡು ಕಾನೂನಿನಿಂದ ಆಳಲ್ಪಡುತ್ತಿದೆ”: ಇಮ್ರಾನ್ ಖಾನ್!
  • ಹಾವರ್ಡ್ ನಿಂದ ಭಾರತೀಯ, ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಹೊರಹೋಗುವಂತೆ ಒತ್ತಾಯಿಸಲಾಗುತ್ತಿದೆಯೇ?
  • ಈ ರಾಶಿಯವರಿಗೆ ಕಷ್ಟ ಕಾಲದಲ್ಲಿ ಪತ್ನಿಯೇ ಆಸರೆ, ಈ ರಾಶಿಯವರಿಗೆ ಪೂರ್ವಜರ ಆಸ್ತಿ ಸಿಗಲಿದೆ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In