• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Editor by Editor
February 18, 2024
in ಬೆಂಗಳೂರು
0
ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

SUDDIKSHANA KANNADA NEWS/ DAVANAGERE/ DATE:18-02-2024

ಹಾವೇರಿ: ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಜ್ಯದ 4 ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಆಗಿರಬಹುದಾದ ಅಕ್ರಮದ ತನಿಖೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು.

ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ:

ಈಗಿನ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಆದ್ದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಶಿಕ್ಷಿಸುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.

ಅಕ್ಕಿ ಕೊರತೆ ಇಲ್ಲ

ಹಿಂದುಳಿದ ವರ್ಗಗಳ ವಸತಿ ನಿಲಯಗಳಿಗೆ ಅಕ್ಕಿ ಕೊರತೆ ಕಾಡುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅಕ್ಕಿ ಹಾಸ್ಟೆಲ್ ಗಳಿಗಾಗಲಿ, ಫಲಾನುಭವಿಗಳಿಗಾಗಲಿ ನೀಡುವ ಅಕ್ಕಿಸರಬರಾಜಿಗೆ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಮಟ್ಕಾ ದಂಧೆ , ಪರಿಶೀಲಿಸಿ ಕ್ರಮ

ಹಾವೇರಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕೋರಿದ್ದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮರಳು ದಂಧೆ ವಿರುದ್ಧ ಕ್ರಮ

ತುಂಗಭದ್ರಾ ನದಿದಂಡೆಯಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಪ್ರಶ್ನಿಸಲಾಗಿ, ಮರಳು ದಂಧೆ ನಡೆಯುತ್ತಿದ್ದಲ್ಲಿ , ಕಾರಣಕರ್ತರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂಧೆಯನ್ನು ನಿಲ್ಲಿಸಲಾಗುವುದು ಎಂದರು.

ಕೇಂದ್ರದಿಂದ ಬರಪರಿಹಾರ ಬಂದಿಲ್ಲ

ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸರ್ಕಾರ 5 ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಮೂರು ಮನವಿಗಳನ್ನು ಸಲ್ಲಿಸಿದೆ. 35 ಸಾವಿರ ಕೋಟಿ ರೂ.ಗಳ ಬೆಳೆ ನಷ್ಟವಾಗಿದ್ದು, ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪ್ರಕಾರ , ರಾಜ್ಯ ಸರ್ಕಾರ 18171 ಕೋಟಿ ರೂ.ಗಳ ಬರಪರಿಹಾರವನ್ನು ಕೇಂದ್ರಕ್ಕೆ ಕೋರಿದೆ. ಆದರೆ ಇಂದಿನವರೆಗೆ ಕೇಂದ್ರದಿಂದ ಹಣಬಿಡುಗಡೆ ಸೇರಿದಂತೆ ಯಾವುದೇ ಕ್ರಮ ಆಗಿಲ್ಲ ಎಂದರು.

ಸಿಎಂ ಹಾಗೂ ಡಿಸಿಎಂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಬಗ್ಗೆ ಉತ್ತರಿಸಿ, ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ನಾಯಕರು, ಶಾಸಕರು, ಪಕ್ಷದ ಸಮಿತಿಯವರು ಸೂಚಿಸಿದ ಅಭ್ಯರ್ಥಿಯು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರಾಥಮಿಕ ಸಭೆಯಾಗಿದ್ದು, ಮೊದಲ ಪಟ್ಟಿ ಸಧ್ಯದಲ್ಲಿಯೇ ಬಿಡುಗಡೆ ಮಾಡಲಿರುವುದಾಗಿ ತಿಳಿಸಿದರು.

Next Post
ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?

ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?

Leave a Reply Cancel reply

Your email address will not be published. Required fields are marked *

Recent Posts

  • 400 ‘ಟರ್ಕಿಶ್’ ಡ್ರೋನ್‌ಗಳು ಉಡೀಸ್: 36 ಸ್ಥಳ ಗುರಿಯಾಗಿಸಿಕೊಂಡಿದ್ದ ಪಾಕ್ ಗೆ ಮುಖಭಂಗ!
  • ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
  • ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
  • ಕಾಮಗಾರಿಗಳು ಕಳಪೆಯಾಗದಂತೆ ನಿಗಾವಹಿಸಿ: ಎಸ್. ಎಸ್. ಮಲ್ಲಿಕಾರ್ಜುನ್ ಸೂಚನೆ
  • ಆಪರೇಷನ್ ಸಿಂಧೂರ್ ಯಶಸ್ಸು: ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In