SUDDIKSHANA KANNADA NEWS: DAVANAGERE\ DATE:11-05-2024
ದಾವಣಗೆರೆ ಕಾಂಗ್ರೆಸ್ ಕಾರ್ಪೊರೇಟರ್ ಕಲ್ಲಳ್ಳಿ ನಾಗರಾಜ್ ವಿಧಿವಶ: ಏನಾಗಿತ್ತು…?
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾಗಿದ್ದ ಕಲ್ಲಳ್ಳಿ ನಾಗರಾಜ್ ನಿಧನ ಹೊಂದಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಶಾಲಿಯಾಗಿದ್ದರು.
ಕಳೆದ ಕೆಲ ವರ್ಷಗಳಿಂದ ಗಂಟಲು ಕ್ಯಾನ್ಸರ್ ಬಾಧೆ ಕಾಡುತಿತ್ತು. ಚಿಕಿತ್ಸೆಯನ್ನೂ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ 4.50ಕ್ಕೆ ಕೊನೆಯುಸಿರೆಳೆದ ಕಲ್ಲಳ್ಳಿ ನಾಗರಾಜ್ ಅವರು, ಪತ್ನಿ, ಇಬ್ಬರು ಮಕ್ಕಳು, ಅಪಾರ ಸ್ನೇಹಿತರು, ಕುಟುಂಬಸ್ಥರು, ಸಂಬಂಧಿಕರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 3.30ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ಪ್ರಚಾರ ನಡೆಸಿದ್ದರು. ಕಲ್ಲಳ್ಳಿ ನಾಗರಾಜ್ ನಿಧನಕ್ಕೆ ಕಾಂಗ್ರೆಸ್, ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿಸಿಗಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.