ದಾವಣಗೆರೆ: ರಾಟ್ ವೈಲರ್ ಶ್ವಾನಗಳ ದಾಳಿಗೆ ಬಲಿಯಾದ ಮಕ್ಕಳಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಕೊಡಿಸುವ ಭರವಸೆ ನೀಡಲಾಗಿದೆ.
READ ALSO THIS STORY: “ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಕೇಸ್: ನಾಯಿ ಮಾಲೀಕರ ಪತ್ತೆ ಹಚ್ಚಿ ಎಫ್ಐಆರ್ ದಾಖಲಿಸಿ”
ಹೊನ್ನೂರು ಗೊಲ್ಲರಹಟ್ಟಿಯ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ರಾಟ್ ವೈಲರ್ ನಾಯಿ ದಾಳಿಗೊಳಗಾಗಿ ಮೃತಪಟ್ಟ ಅನಿತಾ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿಸುವ ಭರವಸೆ ಕೊಡಲಾಗಿದೆ.
ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಾಪೂಜಿ ಬಡಾವಣೆಯ ನಿವಾಸಿ ಅನಿತಾ ಅವರಿಗೆ ನಾಗವೇಣಿ, ಅನುಷಾ , ರಾಮಚರಣ ಹಾಗೂ ಸಾಕು ಮಗಳು ಐಶ್ವರ್ಯ ಸೇರಿ ನಾಲ್ಕು ಜನ ಮಕ್ಕಳಿದ್ದಾರೆ.
ಈ ಮಕ್ಕಳಿಗೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಯಕೊಂಡ ಶಾಸಕ ಕೆ. ಎಸ್. ಬಸವಂತಪ್ಪ ತಿಳಿಸಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿ ಅನಿತಾ ಅವರ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಧೈರ್ಯ ಹೇಳಿದ ಶಾಸಕರು, ಮುಂದೆ ಈ ರೀತಿಯ ಘಟನೆಯಾಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.





Leave a comment