SUDDIKSHANA KANNADA NEWS/DAVANAGERE/DATE:25_12_2025
ಬೆಂಗಳೂರು: ಚಿತ್ರದುರ್ಗದ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಅತೀವ ದುಃಖವನ್ನು ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.
ಈ ಭೀಕರ ದುರಂತದಲ್ಲಿ ವಿಧಿವಶರಾದವರಿಗೆ ದೇವರು ಸದ್ಗತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಗಲಿದವರ ಕುಟುಂಬದವರಲ್ಲಿ ನನ್ನ ತೀವ್ರ ಸಂತಾಪಗಳು. ಈ ಘಟನೆ ಮನಸ್ಸಿಗೆ ತುಂಬಾನೇ ಬೇಸರ ತಂದಿದೆ. ಈ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.





Leave a comment