ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಲಾಲು ಯಾದವ್ ಕುಟುಂಬ ಕ್ರಿಮಿನಲ್ ಸಿಂಡಿಕೇಟ್ ಆಗಿ ವರ್ತಿಸಿದೆ ಎಂದು ದೆಹಲಿ ನ್ಯಾಯಾಲಯವು ಆಕ್ರೋಶ ವ್ಯಕ್ತಪಡಿಸಿದೆ.
ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಮತ್ತು ಅವರ ಕುಟುಂಬದ ವರ್ತನೆ ಕ್ರಿಮಿನಲ್ ನಂತಿದೆ ಎಂದು ಕಿಡಿಕಾರಿದೆ. ಲಾಲು ಕುಟುಂಬದ ವಿರುದ್ಧದ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳನ್ನು ರೂಪಿಸಲು ಆದೇಶಿಸಲಾಗಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಆರೋಪಗಳನ್ನು ರೂಪಿಸುವ ಕುರಿತು ಆದೇಶವನ್ನು ಹೊರಡಿಸುತ್ತಾ, ಲಾಲು ಯಾದವ್ ಮತ್ತು ಅವರ ಕುಟುಂಬದವರು “ಸಮಂಜಸವಾದ ಅನುಮಾನದ ಆಧಾರದ ಮೇಲೆ” ವ್ಯಾಪಕ ಪಿತೂರಿಯನ್ನು ನಡೆಸಿದ್ದಾರೆ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಎಂದು ಹೇಳಿದರು.
ಲಾಲು ಯಾದವ್ ಮತ್ತು ಅವರ ಕುಟುಂಬವನ್ನು ಖುಲಾಸೆಗೊಳಿಸಬೇಕೆಂಬ ಅರ್ಜಿಯನ್ನು ಒಪ್ಪಲಾಗದು ಎಂದು ನ್ಯಾಯಾಲಯ ಹೇಳಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ ಆರೋಪಪಟ್ಟಿಯನ್ನು ಗಮನಿಸಿದ ನ್ಯಾಯಾಲಯ, ಲಾಲು ಯಾದವ್ ಅವರ ಸಹಾಯಕರನ್ನು ಹಗರಣದಲ್ಲಿ ಸಹ-ಸಂಚುಕೋರರು ಎಂದು ಗುರುತಿಸಲಾಗಿದೆ ಎಂದು ಹೇಳಿದೆ.
ಇದಲ್ಲದೆ, ಲಾಲು ಯಾದವ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಅಧಿಕೃತ ಸ್ಥಾನಗಳಿಂದ ಸ್ವತಂತ್ರವಾಗಿ ಕ್ರಿಮಿನಲ್ ಉದ್ಯಮದ ಭಾಗವಾಗಿ ವರ್ತಿಸುತ್ತಿದ್ದಾರೆ ಎಂಬ ಬಲವಾದ ಸೂಚನೆಗಳಿವೆ ಎಂದು ನ್ಯಾಯಾಲಯ ಹೇಳಿದೆ.





Leave a comment