ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಚಂದ್ರಶೇಖರ್ ಸಂಕೊಳ್ ಆತ್ಮಹತ್ಯೆ ಕೇಸ್ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
READ ALSO THIS STORY: EXCLUSIVE: ಶಾಸಕನಾಗಿ ಜನಸೇವೆ ಮಾಡ್ಬೇಕೆಂಬ ಕನಸು ಕಂಡಿದ್ದ ನೀರು ಕೊಟ್ಟ ಭಗೀರಥ ಚಂದ್ರಶೇಖರ್ ಸಂಕೊಳ್ ಸಾಲದ ಸುಳಿಗೆ ಸಿಲುಕಿದ್ದೇಗೆ? ಮಕ್ಕಳು ಆತ್ಮಹತ್ಯೆ ಯತ್ನ ಮಾಡಿದ್ಯಾಕೆ?
ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನೂರು ಬಳಿಯ ಬಿಸ್ಲೇರಿ ಜಮೀನಿನಲ್ಲಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಉಮಾ ಪ್ರಶಾಂತ್ ಅವರು ಭೇಟಿ ಮಾಡಿ ಮಾಹಿತಿ ಪಡೆದರು.
ಮಾಜಿ ಮಹಾನಗರ ಪಾಲಿಕೆ ಸದಸ್ಯ ಚಂದ್ರಶೇಖರ್ ಸಂಕೋಳ್ ಆತ್ಮಹತ್ಯೆ ಕೇಸ್ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಹದಡಿ ಪೊಲೀಸ್ ಠಾಣೆಗೆ ಬೆಳೆಗ್ಗೆ ಮಾಹಿತಿ ಬಂದಿದೆ. ಮನೆಯಲ್ಲಿ ಕಲಹ ಆಗಿದೆ, ತಂದೆ ಸಮಯ ಕೊಡ್ತಾ ಇಲ್ಲ ಎಂದು ಮಕ್ಕಳು ಬೇಸರಗೊಂಡಿದ್ದರು. ಮಾತನಾಡಬೇಕು ಬೇಗ ಬನ್ನಿ ಎಂದು ತಂದೆಗೆ ಫೋನ್ ಮಾಡಿದ್ದಾರೆ. ತಂದೆ ಮನೆಗೆ ಹೋಗುವುದು ತಡವಾಗಿದ್ದಕ್ಕೆ ಬೇಸರಗೊಂಡಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.
ಈ ವೇಳೆ ತಾಯಿಗೆ ಆತ್ಮಹತ್ಯೆ ಮಾಡಿಕೊಳ್ಳೋಣ ಬನ್ನಿ ಎಂದು ಪುತ್ರ ಹಾಗೂ ಪುತ್ರಿ ಕರೆದಿದ್ದಾರೆ. ಆಗ ತಾಯಿ ಮಕ್ಕಳಿಗೆ ಬುದ್ದಿ ಹೇಳಿ ಕೆಳಗಡೆ ಬಂದಿದ್ದಾರೆ. ಮರಳಿ ಹೋಗುವಷ್ಟರಲ್ಲಿ ಪುತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದು ಕಂಡು ಬಂದಿದ್ದು, ತಕ್ಷಣ ಮಕ್ಕಳನ್ನು ಆಸ್ಪತ್ರೆ ರವಾನಿಸಲಾಗಿದೆ. ಮಕ್ಕಳ ಆತ್ಮಹತ್ಯೆ ವಿಷಯ ಕೇಳಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಇದೆ
ಎಂದು ಉಮಾ ಪ್ರಶಾಂತ್ ಹೇಳಿದರು.
ಪುತ್ರಿ ಪವಿತ್ರಾ ಸ್ಥಿತಿ ಗಂಭೀರ ಇದ್ದು, ಪುತ್ರ ಚೇತರಿಸಿಕೊಂಡಿದ್ದಾನೆ ಎಂದು ಮಾಹಿತಿ ಇದೆ. ಸುಕೋ ಟಿಂ ಪರಿಶೀಲನೆ ಮಾಡುತ್ತಿದೆ. ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಬರುತ್ತಿದ್ದಾರೆ. ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ. ಮನೆಯವರು ದೂರು ನೀಡಿಲ್ಲ. ದೂರು ನೀಡಿದ ತಕ್ಷಣ ಹೆಚ್ಚಿನ ತನಿಖೆ ಆರಂಭಿಸಲಾಗುವುದು. ಮಕ್ಕಳ ಆತ್ಮಹತ್ಯೆ ಹಾಗೂ ತಂದೆ ಆತ್ಮಹತ್ಯೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ಆಗಿದ್ದು, ಹದಡಿ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.






Leave a comment