Home ಕ್ರೈಂ ನ್ಯೂಸ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Share
Share

ದಾವಣಗೆರೆ: ಹರಿಹರ ತಾಲೂಕಿನ ಚಿಕ್ಕಬಿದರೆ, ದುಗ್ಗತಿ ಸೇರಿದಂತೆ ಗ್ರಾಮಗಳಲ್ಲಿನ ಭೂ ಕಬಳಿಕೆ, ರೈತರ ಬಲವಂತ ಒಕ್ಕಲೆಬ್ಬಿಸುವಿಕೆ ವಿರುದ್ಧ ಧ್ವನಿ ಎತ್ತಿದ್ದೇನೆ. ಈ ಸಂಬಂಧ ದೂರು ನೀಡಿದರೂ ಕಾನೂನು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅವ್ಯವಹಾರ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದ್ದಾರೆ.

READ ALSO THIS STORY: ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮೀಣ ಪೊಲೀಸರಿಗೆ ದೂರು: ಬಿ. ಪಿ. ಹರೀಶ್

ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿಯೇ ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದೇನೆ. ಎರಡು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದ್ದರೂ ಈವರೆಗೂ ಅಧಿಕಾರಿಗಳು ವರದಿ ಸಲ್ಲಿಸಿಲ್ಲ. ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕಾದ ಸಿಎಸ್ ನಿರ್ಲಕ್ಷ್ಯ ತೋರಿದ್ದಾರೆ. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು ದೂರು ನೀಡಿದರೂ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸಿ ರಾಜ್ಯಪಾಲರಿಗೂ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.

ರೈತರ ಕಬಳಿಕೆ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇನೆ. ದಾಖಲೆಗಳನ್ನೂ ನೀಡಿದ್ದೇನೆ. ಆದರೂ ಸಂಬಂಧಪಟ್ಟ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇಂಥ ಕೆಟ್ಟ ವ್ಯವಸ್ಥೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ಜಿಲ್ಲಾಡಳಿತವೂ
ಈ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯ ಕಾರ್ಯದರ್ಶಿಗಳವರೇ ನಾನು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದರೂ ದಾವಣಗೆರೆಯ ಅಧಿಕಾರಿಗಳು ಮೀನಾಮೇಷ ಎಣಿಸುತ್ತಾ ಕುಳಿತಿದ್ದಾರೆ. ಸುಮಾರು ಎಂಟು ತಿಂಗಳಾದರೂ ವರದಿ ಕೊಡದ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿಗಳು ಪ್ರಶ್ನಿಸಿಲ್ಲ. ಕಂದಾಯ ಇಲಾಖೆ, ಅರಣ್ಯ ಇಲಾಖೆಗೆ ಸೇರಿದ ಜಾಗ, ಹಳ್ಳಗಳನ್ನು ಮುಚ್ಚಿರುವ ಕುರಿತಂತೆ ಇದುವರೆಗೆ ಸಮರ್ಪಕವಾದ ಉತ್ತರವೂ ಬಂದಿಲ್ಲ, ಕ್ರಮವೂ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ
ಶಿವಕುಮಾರ್, ಬಿ. ಟಿ. ಸಿದ್ಧಪ್ಪ, ಪಿ. ರಾಜೇಶ್ ನಾಯ್ಕ ಮತ್ತಿತರರು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.