SUDDIKSHANA KANNADA NEWS/ DAVANAGERE/ DATE:19-09-2024
ದಾವಣಗೆರೆ: ನಗರದ ಅರಳಿಮರ ವೃತ್ತದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅರಳಿಮರ ಸರ್ಕಲ್ ಬಳಿ ವೆಂಕೋಭೋವಿ ಕಾಲೋನಿಯ ಎರಡನೇ ಕ್ರಾಸ್ ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಇಲ್ಲಿಗೆ ಹಿಂದೂ ಜಾಗರಣ ವೇದಿಕೆಯ ಸಹ ಸಂಚಾಲಕ ಸತೀಶ್ ಪೂಜಾರಿ ಅವರು ಹೋಗಿದ್ದರು. ಬಳಿಕ ಎರಡು ಗುಂಪುಗಳು ಜಮಾಯಿಸಿವೆ.
ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಧ್ಯೆದಲ್ಲಿ ಕಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರತ್ತವೂ ಕಲ್ಲು ತೂರಿ ಬಂದಿವೆ. ಡಿಸಿಆರ್ ಬಿ ಸಿಬ್ಬಂದಿ ರಘು ಅವರ ತಲೆಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಪ್ರತಿಭಟನೆ ವೇಳೆ ಆಜಾದ್ ನಗರಕ್ಕೆ ಹಿಂದೂಗಳು ನುಗ್ಗುತ್ತೇವೆ ಎಂಬ ಸತೀಶ್ ಪೂಜಾರಿ ವಿಡಿಯೋ ವೈರಲ್ ಆಗಿತ್ತು. ಇದು ಅನ್ಯ ಕೋಮಿನ ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ.