ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡಕ್ಕೆ ಸಲಹೆಗಾರರು, ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

On: October 21, 2024 9:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-10-2024

ದಾವಣಗೆರೆ: ಶಿವಮೊಗ್ಗ ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಸಲಹೆಗಾರರು 1 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 2 ಹುದ್ದೆ ವಿದ್ಯಾರ್ಹತೆ ಬಿ.ಎಸ್.ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುತ್ತದೆ.

ಈ ನೇಮಕಾತಿಯು ದಿ: 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿAದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಿವರಿಸಿರುವ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ/ಪ.ಪಂ/ಪ್ರವರ್ಗ-1 40 ವರ್ಷಗಳು. ಆಸಕ್ತರು ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಚೇರಿ ಓ ಟಿ ರಸ್ತೆ ಶಿವಮೊಗ್ಗ ಇಲ್ಲಿಂದ ಅರ್ಜಿಯನ್ನು ಪಡೆದು ನ.05 ರೊಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರಿಗೆ ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment