ಬೆಂಗಳೂರು: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕಾಗಿ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಕಬ್ಬಿಣದ ರಾಡ್ನಿಂದ ಭೀಕರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಆನಂದ್ ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ದೂರುದಾರರ ಪತ್ನಿಯೊಂದಿಗೆ ಆನಂದ್ ನಾಯ್ಡು ಕಳೆದ ಮೂರ್ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಷಯವಾಗಿ ಮಕ್ಕಳು ಪ್ರಶ್ನಿಸಿದಾಗ ಆಕ್ರೋಶಗೊಂಡ ನಾಯ್ಡು, ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಬ್ಬಿಣದ ರಾಡ್ನಿಂದ ಹೊಡೆದ ಪರಿಣಾಮ ಮಕ್ಕಳ ಕೈ, ಕಾಲು ಹಾಗೂ ದೇಹದ ಇತರ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಸಂಬಂಧ ಬೆಂಗಳೂರಿನ ಅಣ್ಣಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ವಿರುದ್ಧ ಕಠಿಣ ಪೋಕ್ಸೋ (POCSO) ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Anand Naidu
- Annapoorneshwari Nagar Police Station
- Bengaluru Crime News.
- Bengaluru North District Congress
- Child assault case
- Congress leader assault
- Karnataka News
- POCSO Act
- ಅಣ್ಣಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ
- ಆನಂದ್ ನಾಯ್ಡು
- ಕರ್ನಾಟಕ ಸುದ್ದಿ
- ಕಾಂಗ್ರೆಸ್ ಮುಖಂಡನಿಂದ ಹಲ್ಲೆ
- ಪೋಕ್ಸೋ ಕಾಯ್ದೆ
- ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್
- ಬೆಂಗಳೂರು ಕ್ರೈಮ್ ಸುದ್ದಿ
- ಮಕ್ಕಳ ಮೇಲೆ ಹಲ್ಲೆ





Leave a comment