Home ಕ್ರೈಂ ನ್ಯೂಸ್ ಚನ್ನಗಿರಿ ತಾಲೂಕಿನಲ್ಲಿ ಭಾರೀ ಮಳೆಗೆ ಬೀದಿಗೆ ಬಿದ್ದ ಕುಟುಂಬಗಳು: ಬೆಳೆ ಮತ್ತು ಮನೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಗೆ ಆದೇಶ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಚನ್ನಗಿರಿ ತಾಲೂಕಿನಲ್ಲಿ ಭಾರೀ ಮಳೆಗೆ ಬೀದಿಗೆ ಬಿದ್ದ ಕುಟುಂಬಗಳು: ಬೆಳೆ ಮತ್ತು ಮನೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಗೆ ಆದೇಶ!

Share
ಮಳೆ
Share

ಚನ್ನಗಿರಿ: ತಾಲ್ಲೂಕಿನಾದ್ಯಂತ ಸುರಿದ ಭಾರೀ ಆಲಿಕಲ್ಲು ಸಹಿತ ಮಳೆಯಿಂದಾಗಿ ವ್ಯಾಪಕ ಬೆಳೆ ಹಾನಿ ಹಾಗೂ ಮನೆಗಳು ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಅವರ ನೇತೃತ್ವದಲ್ಲಿ ತುರ್ತು ಅಧಿಕಾರಿಗಳ ಸಭೆ ಜರುಗಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಮುಂಗಾರು ಆರಂಭದ ದಿನಗಳಲ್ಲೇ ಇಂತಹ ಭೀಕರ ಪ್ರಕೃತಿ ವಿಕೋಪ ಸಂಭವಿಸಿರುವುದು ಆತಂಕಕಾರಿಯಾಗಿದೆ. ಹಲವು ಗ್ರಾಮಗಳಲ್ಲಿ ರೈತರ ಬೆಳೆಗಳು ನಾಶವಾಗಿದ್ದು, ಕೆಲವು ಬಡ ಕುಟುಂಬಗಳ ಮನೆಗಳು ಕುಸಿದು ಬಿದ್ದಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಂಟಿ ಸಮೀಕ್ಷೆಗೆ ಆದೇಶ:

ಮಳೆಯಿಂದ ಹಾನಿಗೊಳಗಾದ ರೈತರ ಮತ್ತು ಬೆಳೆಗಳ ಸಂಪೂರ್ಣ ವಿವರಗಳನ್ನು ವಿಳಂಬ ಮಾಡದೆ ಸಂಗ್ರಹಿಸಿ, ಸರ್ಕಾರಕ್ಕೆ ತುರ್ತು ವರದಿ ಸಲ್ಲಿಸಬೇಕು. ಮನೆ ಕಳೆದುಕೊಂಡ ಕುಟುಂಬಗಳಿಗೆ ತಕ್ಷಣವೇ ಅಗತ್ಯ ನೆರವು ಮತ್ತು ಗರಿಷ್ಠ ಪರಿಹಾರ ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆಗಾಲದ ಅವಧಿಯಲ್ಲಿ ಸಾರ್ವಜನಿಕರ ದೈನಂದಿನ ಜನಜೀವನಕ್ಕೆ ಯಾವುದೇ ಅಡ್ಡಿಯಾಗದಂತೆ ನಿರಂತರ ನಿಗಾವಹಿಸಿ ಕೆಲಸ ಮಾಡುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ಚನ್ನಗಿರಿ ಸಹಾಯಕ ಕೃಷಿ ನಿರ್ದೇಶಕರಾದ ಅರುಣ್‌ಕುಮಾರ್, ಕಂದಾಯ ಅಧಿಕಾರಿ ಜಬಿವುಲ್ಲಾ, ಪಿಡಿಒ ಹನುಮಂತರಾಯ, ವಿಎ ರೇಷ್ಮಾ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಪ್ರಮುಖರಾದ ಶಿವಣ್ಣ, ಅಯೂಬ್ ಖಾನ್, ಶಿವಾಜಿ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles