Home ದಾವಣಗೆರೆ ಡಿ.ಕೆ. ಶಿವಕುಮಾರ್‌ಗೆ ‘ಚೆಕ್-ಮೇಟ್’ ಇಡಲು ಮುಂದಾದ ಸಿದ್ದರಾಮಯ್ಯ! ಸಮನ್ವಯ ಸಮಿತಿ ಅಸ್ತ್ರಕ್ಕೆ ಹೈಕಮಾಂಡ್ ಬ್ರೇಕ್!
ದಾವಣಗೆರೆನವದೆಹಲಿಬೆಂಗಳೂರು

ಡಿ.ಕೆ. ಶಿವಕುಮಾರ್‌ಗೆ ‘ಚೆಕ್-ಮೇಟ್’ ಇಡಲು ಮುಂದಾದ ಸಿದ್ದರಾಮಯ್ಯ! ಸಮನ್ವಯ ಸಮಿತಿ ಅಸ್ತ್ರಕ್ಕೆ ಹೈಕಮಾಂಡ್ ಬ್ರೇಕ್!

Share
ಸಿದ್ದರಾಮಯ್ಯ
Share

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹೈಡ್ರಾಮಾ ಮುಂದುವರಿದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು, ನೂತನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ತಮ್ಮದೇ ಆದ ಅಧಿಕಾರ ಕೇಂದ್ರವನ್ನು ಉಳಿಸಿಕೊಳ್ಳಲು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.

ಪಕ್ಷ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಲು ‘ಸಮನ್ವಯ ಸಮಿತಿ’ ರಚಿಸುವಂತೆ ಸಿದ್ದರಾಮಯ್ಯ ಹೈಕಮಾಂಡ್‌ಗೆ ಪ್ರಸ್ತಾಪ ಇಟ್ಟಿದ್ದಾರೆ. ಆದರೆ, ಹೈಕಮಾಂಡ್ ಇದಕ್ಕೆ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಲಿದ ಸಿದ್ದರಾಮಯ್ಯ:

ಕಳೆದ ಕೆಲವು ತಿಂಗಳುಗಳಿಂದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ನಡೆಯುತ್ತಿದ್ದ ಅಧಿಕಾರ ಹಂಚಿಕೆಯ (2.5 ವರ್ಷಗಳ ಒಪ್ಪಂದ) ಹಗ್ಗಜಗ್ಗಾಟ ಕೊನೆಗೂ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ಗುರುವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆ ಮಾಡಲಾಗುತ್ತದೆ.

ಮತ್ತೆ 2018ರ ಮಾದರಿ ತರಲು ಯತ್ನ:

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ ರಾಜ್ಯ ರಾಜಕಾರಣದಲ್ಲಿ ತಮ್ಮ ಹಿಡಿತ ಸಡಿಲವಾಗಬಾರದು ಎಂಬ ನಿಟ್ಟಿನಲ್ಲಿ ಸಿದ್ದರಾಮಯ್ಯ ಹೊಸ ದಾಳ ಉರುಳಿಸಿದ್ದಾರೆ. 2018ರ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ‘ಸಮನ್ವಯ ಸಮಿತಿ’ ಮಾದರಿಯನ್ನು ಈಗಲೂ ಮರುಸ್ಥಾಪಿಸಿ, ಅದಕ್ಕೆ ತಮ್ಮನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಹೈಕಮಾಂಡ್ ನಿರಾಕರಣೆ ಏಕೆ?

ಸಿದ್ದರಾಮಯ್ಯ ಅವರ ಈ ಪ್ರಸ್ತಾಪಕ್ಕೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೆರಚಿದೆ ಎನ್ನಲಾಗಿದೆ. 2018ರಲ್ಲಿ ಸಮ್ಮಿಶ್ರ ಸರ್ಕಾರ ಇದ್ದಿದ್ದರಿಂದ ಸಮನ್ವಯ ಸಮಿತಿಯ ಅಗತ್ಯವಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಇರುವುದರಿಂದ, ಹೊಸದಾಗಿ ಸಮನ್ವಯ ಸಮಿತಿ ರಚಿಸಿ ಮತ್ತೊಂದು ಪರ್ಯಾಯ ಅಧಿಕಾರ ಕೇಂದ್ರ ಸೃಷ್ಟಿಸುವುದು ಸರಿಯಲ್ಲ ಎಂಬ ನಿಲುವಿಗೆ ಹೈಕಮಾಂಡ್ ಬಂದಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ರಾಷ್ಟ್ರ ರಾಜಕಾರಣದ ಆಫರ್ ಬೇಡ ಎಂದ ಸಿದ್ದರಾಮಯ್ಯ:

ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸೀಟು ನೀಡಿ, ದೆಹಲಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ನೀಡಲು ಹೈಕಮಾಂಡ್ ಉತ್ಸುಕವಾಗಿತ್ತು. ಆದರೆ, ತಾವು ಯಾವುದೇ ಕಾರಣಕ್ಕೂ ಕರ್ನಾಟಕ ಬಿಟ್ಟು ಕದಲುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಸೇರಿದಂತೆ ತಮ್ಮ ಬಣದ ಶಾಸಕರಿಗೆ ಪ್ರಮುಖ ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಶನಿವಾರದ ಶಾಸಕಾಂಗ ಸಭೆಯ ಬಳಿಕ ನೂತನ ಸಚಿವ ಸಂಪುಟ ಪುನಾರಚನೆಯ ಚಿತ್ರಣ ಸ್ಪಷ್ಟವಾಗಲಿದೆ.

Share

Leave a comment

Leave a Reply

Your email address will not be published. Required fields are marked *

Related Articles