ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಹಾನಗರ ಪಾಲಿಕೆ ತಾಂತ್ರಿಕ ಶಾಖೆಯ ವರ್ಕ್ ಇನ್ ಸ್ಪೆಕ್ಟರ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ!

On: November 20, 2024 5:49 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-11-2024

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ತಾಂತ್ರಿಕ ಶಾಖೆಯ ವರ್ಕ್ ಇನ್ ಸ್ಪೆಕ್ಟರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಿಟ್ಟುವಳ್ಳಿ ವಾಸಿಯಾದ ಲಕ್ಷ್ಮಣ್ ಆತ್ಮಹತ್ಯೆಗೆ ಶರಣಾದ ಮಹಾನಗರ ಪಾಲಿಕೆಯ ನೌಕರ. ಅರುಣ್ ಸರ್ಕಲ್ ಬಳಿ ಇರುವ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ತಾಂತ್ರಿಕ ಶಾಖೆಯ ವರ್ಕ್ ಇನ್ ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಸರಿಯಾಗಿ ಕೆಲಸಕ್ಕೂ ಕೂಡ ಹೋಗುತ್ತಿರಲಿಲ್ಲ. ಇದರಿಂದಾಗಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದ್ದರಿಂದ ಮನನೊಂದು ಲಕ್ಷ್ಮಣ್ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment