Home ದಾವಣಗೆರೆ ದಾವಣಗೆರೆ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿತ ಆಗಿರುವುದು ಎಲ್ಲಿ? ರೈತರಿಗೆ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ಅನುಸರಿಸಬೇಕು ಎಂದ್ರು ಡಿಸಿ?
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿತ ಆಗಿರುವುದು ಎಲ್ಲಿ? ರೈತರಿಗೆ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ಅನುಸರಿಸಬೇಕು ಎಂದ್ರು ಡಿಸಿ?

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವು ತೀವ್ರವಾಗಿ ಕುಸಿದಿದೆ. ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 11.89 ಮೀಟರ್‌ ಇದ್ದು ಪ್ರಸಕ್ತ ಅದು 2.29 ಮೀಟರ್‌ ಗಳಷ್ಟು ಕುಸಿದಿದೆ.

ಜಗಳೂರು ತಾಲ್ಲೂಕಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 4.89 ಮೀಟರ್‌ಗಳಷ್ಟು ಅಂತರ್ಜಲ ಮಟ್ಟ ಕುಸಿದಿರುವುದು ಆತಂಕಕಾರಿ ಸಂಗತಿಯಾಗಿದೆ. ಕುಂದುವಾಡ ಕೆರೆಗೆ ಮುಂದಿನ 2-3 ತಿಂಗಳು ನೀರು ಬರುವ ಸಾಧ್ಯತೆ ಇಲ್ಲದಿರುವುದರಿಂದ ಲಭ್ಯವಿರುವ ನೀರನ್ನೇ ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಬೇಕಾಗಿದೆ.

ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ, ನೆಲ-ಜಲ, ಪರಿಸರ ವೃದ್ಧಿಸಲು, ಮಳೆ ನೀರು ಕೊಯ್ಲಿ, ಸಸಿ ನೆಡುವುದು ಮತ್ತು ಜಿಲ್ಲಾ ಕೆರೆಗಳ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಸೂಚನೆಗಳನ್ನು ನೀಡಿದ್ದಾರೆ.

ರೈತರಿಗೆ ಪರ್ಯಾಯ ಬೆಳೆ ಬೆಳೆಯಲು ಕರೆ:

ರೈತರು ಪ್ರತಿವರ್ಷ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಮತ್ತು ಯೂರಿಯಾ ಸೇರಿದಂತೆ ರಾಸಾಯನಿಕ ಗೊಬ್ಬರಗಳನ್ನು ಅತಿಯಾಗಿ ಬಳಸುತ್ತಿರುವುದರಿಂದ ಮಣ್ಣಿನ ಫಲವತ್ತತೆ ಹಾಳಾಗುತ್ತಿದೆ. ಆದ್ದರಿಂದ ರೈತರು ಪರ್ಯಾಯ ಬೆಳೆಗಳಾದ ರಾಗಿ ಮತ್ತು ದ್ವಿದಳ ಧಾನ್ಯಗಳನ್ನು ಬೆಳೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಮಳೆ ನೀರು ಕೊಯ್ಲು ಕಡ್ಡಾಯ:

 ಜಿಲ್ಲಾ ಪಂಚಾಯತ್‌ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಂಪೂರ್ಣ ಕಟ್ಟಡದಲ್ಲಿ ಈಗಾಗಲೇ ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಲಾಗಿದೆ. ಇದೇ ಮಾದರಿಯನ್ನು ಜಿಲ್ಲೆಯ ಎಲ್ಲಾ ಇಲಾಖೆಗಳು, ಅಧಿಕಾರಿಗಳು ತಮ್ಮ ಸ್ವಂತ ಮನೆಗಳು, ಶಾಲಾ-ಕಾಲೇಜುಗಳು, ವಸತಿನಿಲಯಗಳು, ಕಲ್ಯಾಣ ಮಂಟಪ ಮತ್ತು ಅತಿಥಿಗೃಹಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ದೇವರಾಜ ಅರಸು ಬಡಾವಣೆಯ ರೈಲ್ವೇ ಹಳಿ ಪಕ್ಕದ ಬಫರ್ ವಲಯದಲ್ಲಿದ್ದ ಕಪ್ಪು ಚುಕ್ಕೆ ಪ್ರದೇಶವನ್ನು ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರು ಸೇರಿ ಸುಂದರ ಉದ್ಯಾನವನವಾಗಿ ಪರಿವರ್ತಿಸಿರುವುದನ್ನು ಶ್ಲಾಘಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಇಂತಹ ಜಾಗೃತಿ ನಡೆ ಮಾದರಿಯಾಗಿದೆ ಎಂದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.