Home ದಾವಣಗೆರೆ ಒಸಿ-ಸಿಸಿ ಗೊಂದಲಕ್ಕೆ ಇತಿಶ್ರೀ: ದುಬಾರಿ ಕರೆಂಟ್ ಬಿಲ್‌ನಿಂದ ಮಧ್ಯಮ ವರ್ಗದ ಜನರಿಗೆ ಮುಕ್ತಿ ನೀಡಿದ ಸರ್ಕಾರ!
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಒಸಿ-ಸಿಸಿ ಗೊಂದಲಕ್ಕೆ ಇತಿಶ್ರೀ: ದುಬಾರಿ ಕರೆಂಟ್ ಬಿಲ್‌ನಿಂದ ಮಧ್ಯಮ ವರ್ಗದ ಜನರಿಗೆ ಮುಕ್ತಿ ನೀಡಿದ ಸರ್ಕಾರ!

Share
ಕರೆಂಟ್
Share

ಬೆಂಗಳೂರು: ರಾಜ್ಯದ ಲಕ್ಷಾಂತರ ಮಧ್ಯಮ ವರ್ಗದ ಮನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹಲವು ವರ್ಷಗಳಿಂದ ಒಸಿ (Occupancy Certificate) ಮತ್ತು ಸಿಸಿ (Completion Certificate) ಸಮಸ್ಯೆಯಿಂದಾಗಿ ಕಾಯಂ ಕರೆಂಟ್ ಸಿಗದೇ, ದುಬಾರಿ ತಾತ್ಕಾಲಿಕ/ವಾಣಿಜ್ಯ ದರದಲ್ಲಿ ಬಿಲ್ ಪಾವತಿಸುತ್ತಿದ್ದ ಮನೆಗಳಿಗೆ ಇಂದಿನಿಂದ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಜನಸಾಮಾನ್ಯರ ಈ ಬಹುಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಮುಂದಾಗಿದ್ದು, ಇದರಿಂದ ರಾಜ್ಯದ ಸುಮಾರು 1.54 ಲಕ್ಷ ಮನೆಗಳಿಗೆ ನೇರ ಲಾಭ ಸಿಗಲಿದೆ.

ಯಾರಿಗೆ ಅನ್ವಯಿಸುತ್ತೆ? ಸರ್ಕಾರದ ಪ್ರಮುಖ ಷರತ್ತುಗಳು ಇಲ್ಲಿವೆ: ಕೇವಲ ನಿಯಮ ಉಲ್ಲಂಘನೆಯಾಗಿದೆ ಎಂಬ ಕಾರಣಕ್ಕೆ ಎಲ್ಲಾ ಕಟ್ಟಡಗಳಿಗೂ ಈ ನಿಯಮ ಅನ್ವಯಿಸುವುದಿಲ್ಲ. ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯ ಅನ್ವಯ ಈ ಕೆಳಗಿನ ಷರತ್ತುಗಳನ್ನು ವಿಧಿಸಲಾಗಿದೆ:

ನಿವೇಶನದ ಮಿತಿ: ಗರಿಷ್ಠ 2,400 ಚದರ ಅಡಿ ವರೆಗಿನ ನಿವೇಶನದಲ್ಲಿ ಕಟ್ಟಿರುವ ವಸತಿ ಕಟ್ಟಡಗಳಿಗೆ ಮಾತ್ರ ಇದು ಅನ್ವಯ.

ಮಹಡಿಗಳ ಮಿತಿ: ಗ್ರೌಂಡ್ + 3 ಮಹಡಿಗಳು ಅಥವಾ ಸ್ಟಿಲ್ಟ್ + 4 ಮಹಡಿಗಳ ಮಿತಿಯಿರುವ ಮನೆಗಳಿಗೆ ಮಾತ್ರ ಸೌಲಭ್ಯ.

ಪ್ಲಾನ್ ಉಲ್ಲಂಘನೆ: ಮಂಜೂರಾದ ನಕ್ಷೆಗಿಂತ (Sanctioned Plan) ಗರಿಷ್ಠ ಶೇ. 20 ರಷ್ಟು ಮಾತ್ರ ಉಲ್ಲಂಘನೆ ಇರಬೇಕು.

ಅರ್ಜಿ ದಿನಾಂಕ: ಮೇ 31, 2026 ಕ್ಕಿಂತ ಮೊದಲು ಅರ್ಜಿ ಸಲ್ಲಿಸಿರಬೇಕು ಎಂಬ ಷರತ್ತು ವಿಧಿಸಲಾಗಿದೆ.

ಕಾರ್ಯಪ್ರವೃತ್ತರಾದ ಎಸ್ಕಾಂ ಅಧಿಕಾರಿಗಳು:

ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ ಬೆಸ್ಕಾಂ (BESCOM) ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ಬಾಕಿ ಉಳಿದಿರುವ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳನ್ನು ಶಾಶ್ವತ ಸಂಪರ್ಕಗಳಾಗಿ ಪರಿವರ್ತಿಸುವ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇಲಾಖೆಯ ಮಾರ್ಗಸೂಚಿಯಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ (Physical Verification) ನಡೆಸಿ ಕಾಯಂ ವಿದ್ಯುತ್ ಸಂಪರ್ಕ ಕಲ್ಪಿಸಲಿದ್ದಾರೆ. ಇದರಿಂದಾಗಿ ಪ್ರತಿ ತಿಂಗಳು ದುಬಾರಿ ಕರೆಂಟ್ ಬಿಲ್ ಕಟ್ಟಿ ಸುಸ್ತಾಗಿದ್ದ ಮಧ್ಯಮ ವರ್ಗದ ಜನ ನಿಟ್ಟುಸಿರು ಬಿಡುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.