Home ಕ್ರೈಂ ನ್ಯೂಸ್ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಅಮಾನವೀಯತೆ: ಅತ್ಯಾಚಾರ ಸಂತ್ರಸ್ತೆಯ ಬಡ ತಾಯಿಯಿಂದ ₹10,000 ಲಂಚ ಪಡೆಯುತ್ತಿದ್ದ ಲೇಡಿ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ; ಎಎಸ್‌ಐ ಪರಾರಿ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಅಮಾನವೀಯತೆ: ಅತ್ಯಾಚಾರ ಸಂತ್ರಸ್ತೆಯ ಬಡ ತಾಯಿಯಿಂದ ₹10,000 ಲಂಚ ಪಡೆಯುತ್ತಿದ್ದ ಲೇಡಿ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ; ಎಎಸ್‌ಐ ಪರಾರಿ!

Share
ಪ್ರಿಯಾಂಕ್ ಖರ್ಗೆ
Share

ಕಲಬುರಗಿ: ಕಾನೂನು ಮತ್ತು ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯ ಅಮಾನವೀಯ ಮುಖವೊಂದು ಕಲಬುರಗಿಯಲ್ಲಿ ಅನಾವರಣಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಇಂಥದ್ದೊಂದು ಹೀನ ಘಟನೆ ಬೆಳಕಿಗೆ ಬಂದಿದೆ.

ಕಸ ಆಯ್ದು ಕಷ್ಟದಿಂದ ಜೀವನ ಸಾಗಿಸುತ್ತಿರುವ ಬಡ ಮಹಿಳೆಯ ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನೆರವು ನೀಡಲು ಹಾಗೂ ಚಾರ್ಜ್‌ಶೀಟ್ ಸಲ್ಲಿಸಲು ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಘಟನೆಯ ಹಿನ್ನೆಲೆ:

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಬಡ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಿ, ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸುವಾಗ ಸಂತ್ರಸ್ತೆಗೆ ಅನುಕೂಲವಾಗುವಂತೆ ವರದಿ ಸಿದ್ಧಪಡಿಸಿಕೊಡಲು ಹಾಗೂ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (PP) ನೀಡಲು ಸ್ಟೇಷನ್ ಬಜಾರ್ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಜ್ಯೋತಿ ಹಾಗೂ ಎಎಸ್‌ಐ ಶಿವಶರಣಪ್ಪ ಎಂಬುವವರು ಬರೋಬ್ಬರಿ 10,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲೋಕಾಯುಕ್ತರ ಮಿಂಚಿನ ದಾಳಿ:

ಮಗಳ ಮೇಲಿನ ಅತ್ಯಾಚಾರದ ನೋವಿನಲ್ಲಿದ್ದ ತಾಯಿಗೆ ಪೊಲೀಸರ ಈ ಲಂಚದ ಬೇಡಿಕೆ ಮತ್ತಷ್ಟು ಆಘಾತ ನೀಡಿತು. ಇದರಿಂದ ನೊಂದ ಅವರು ಸಾಮಾಜಿಕ ಕಾರ್ಯಕರ್ತರ ಸಹಾಯದೊಂದಿಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಇನ್‌ಸ್ಪೆಕ್ಟರ್ ಅರುಣಕುಮಾರ್ ಮುರಗುಂಡಿ ನೇತೃತ್ವದ ತಂಡವು ನಡೆಸಿದ ವ್ಯವಸ್ಥಿತ ಕಾರ್ಯಾಚರಣೆಯ ವೇಳೆ, ಪೊಲೀಸ್ ಠಾಣೆಯಲ್ಲೇ ಮಹಿಳೆಯಿಂದ ₹10,000 ಹಣವನ್ನು ಸ್ವೀಕರಿಸುತ್ತಿದ್ದ ಲೇಡಿ ಕಾನ್‌ಸ್ಟೇಬಲ್ ಜ್ಯೋತಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ.

ಎಎಸ್‌ಐ ಪರಾರಿ:

ಲೋಕಾಯುಕ್ತ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ, ಸಹಾಯಕ ಉಪನಿರೀಕ್ಷಕ (ASI) ಶಿವಶರಣಪ್ಪ ಠಾಣೆಯಿಂದ ಎಸ್ಕೇಪ್ ಆಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಲೋಕಾ ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಸಾರ್ವಜನಿಕರ ಆಕ್ರೋಶ:

ಕಡು ಬಡತನದಲ್ಲಿ ಬೆಂದು ಹೋಗಿರುವ, ಅತ್ಯಾಚಾರಕ್ಕೆ ಒಳಗಾದ ಮಗಳ ನ್ಯಾಯಕ್ಕಾಗಿ ಕಣ್ಣೀರಿಡುತ್ತಿರುವ ತಾಯಿಯ ಪರಿಸ್ಥಿತಿಯನ್ನೂ ಲೆಕ್ಕಿಸದೆ ಲಂಚಕ್ಕೆ ಕೈಯೊಡ್ಡಿದ ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಕೃತ್ಯಗಳು ಇಡೀ ಪೊಲೀಸ್ ವ್ಯವಸ್ಥೆಯ ಮೇಲಿರುವ ಸಾರ್ವಜನಿಕ ನಂಬಿಕೆಯನ್ನು ಅಳಿಸಿಹಾಕುತ್ತವೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.