Home ದಾವಣಗೆರೆ ಉತ್ತರ ಪ್ರದೇಶದಲ್ಲಿ ಶಾಕಿಂಗ್ ಘಟನೆ:ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು: ಕಿಟಕಿ ಗಾಜು ಚೂರು ಚೂರು, ಓರ್ವನ ಬಂಧನ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಉತ್ತರ ಪ್ರದೇಶದಲ್ಲಿ ಶಾಕಿಂಗ್ ಘಟನೆ:ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು: ಕಿಟಕಿ ಗಾಜು ಚೂರು ಚೂರು, ಓರ್ವನ ಬಂಧನ!

Share
ಉತ್ತರ ಪ್ರದೇಶ
Share

ಲಕ್ನೋ/ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ರೈಲ್ವೆ ನಿಲ್ದಾಣದ ಬಳಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಯಾಣಿಸುತ್ತಿದ್ದ ಲಕ್ನೋ-ದೆಹಲಿ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12003) ರೈಲಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ಗುರುವಾರ ಸಂಜೆ ನಡೆದಿದೆ.

ಘಟನೆಯ ವಿವರ:

ಕಾನ್ಪುರದಿಂದ ನವದೆಹಲಿಗೆ ತೆರಳುತ್ತಿದ್ದ ಶತಾಬ್ದಿ ಎಕ್ಸ್‌ಪ್ರೆಸ್ ರೈಲು ಗುರುವಾರ ಸಂಜೆ ಸುಮಾರು 7:15 ರ ಸುಮಾರಿಗೆ ಫಿರೋಜಾಬಾದ್‌ನ ರಸೂಲ್‌ಪುರ ಮತ್ತು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿ ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ಎಸೆದ ಕಲ್ಲು ರೈಲಿನ ಎಸಿ ಫಸ್ಟ್ ಕ್ಲಾಸ್ (E1) ಕೋಚ್‌ಗೆ ತಗುಲಿದ್ದು, ಕಿಟಕಿಯ ಹೊರಗಿನ ಗಾಜು ಸಂಪೂರ್ಣವಾಗಿ ಪುಡಿಯಾಗಿದೆ.

ಮೋಹನ್ ಭಾಗವತ್ ಸುರಕ್ಷಿತ:

ಕಲ್ಲು ತೂರಾಟ ನಡೆದ ಕೋಚ್‌ನಲ್ಲೇ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್ ಹಾಗೂ ಉತ್ತರ ಪ್ರದೇಶದ ಸಚಿವ ಭೂಪೇಂದ್ರ ಚೌಧರಿ ಅವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಮೋಹನ್ ಭಾಗವತ್ ಅವರು ಕಿಟಕಿಯ ವಿರುದ್ಧ ದಿಕ್ಕಿನ ಸೀಟಿನಲ್ಲಿ ಕುಳಿತಿದ್ದರಿಂದ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲಿನಲ್ಲಿದ್ದ ಇತರ ಯಾವುದೇ ಪ್ರಯಾಣಿಕರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತನಿಖೆ ಚುರುಕು, ಒಬ್ಬ ವಶಕ್ಕೆ:

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಗ್ರಾ ವಲಯದ ಎಡಿಜಿ ಎಸ್.ಕೆ. ಭಗತ್, ಫಿರೋಜಾಬಾದ್ ಎಸ್‌ಎಸ್‌ಪಿ ಆದಿತ್ಯ ಲಾಂಗೇ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರೈಲ್ವೆ ಸುರಕ್ಷತಾ ಪಡೆ (RPF) ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕಲ್ಲು ತೂರಾಟದ ಹಿಂದಿನ ಉದ್ದೇಶದ ಬಗ್ಗೆ ತನಿಖೆ ಮುಂದುವರಿದಿದೆ. ಅಗತ್ಯ ತಪಾಸಣೆಗಳ ನಂತರ ರೈಲನ್ನು ದೆಹಲಿಯತ್ತ ಬಿಡಲಾಯಿತು

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles