ಅಯೋಧ್ಯೆ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರದ ದೇಣಿಗೆ ಮತ್ತು ಕಾಣಿಕೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ವಿಶೇಷ ತನಿಖಾ ತಂಡ (SIT) ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಪೊಲೀಸರು ಎಂಟು ಜನರ ವಿರುದ್ಧ ಎಫ್ಐಆರ್ (FIR) ದಾಖಲಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರಾದ ಶ್ರೀ ಕೃಷ್ಣ ಮೋಹನ್ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಅಯೋಧ್ಯೆಯ ರಾಮ ಜನ್ಮಭೂಮಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಪ್ರಮುಖ ಆರೋಪಿಗಳು ಯಾರು?
ಮಂದಿರಕ್ಕೆ ಬಂದ ಕಾಣಿಕೆ ಹಾಗೂ ದೇಣಿಗೆಯನ್ನು ಕಳ್ಳತನ ಮತ್ತು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಟಿನ್ನು ಯಾದವ್ ಮತ್ತು ಅನುಕಲ್ಪ ಮಿಶ್ರಾ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಎಫ್ಐಆರ್ನಲ್ಲಿ ಹೆಸರಿಸಲಾಗಿದ್ದು, ಇತರ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಗಳನ್ನು ಹೂಡಲಾಗಿದೆ.
ರಾಜಕೀಯ ಕೆಸರೆರಚಾಟ:
ರಾಮಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ನಾಪತ್ತೆಯಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಜೂನ್ 7 ರಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ವಿರೋಧ ಪಕ್ಷಗಳು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ ಎಂದು ಕಿಡಿಕಾರಿದ್ದರು. ಸದ್ಯ ಎಸ್ಐಟಿ ತನಿಖೆ ಮುಂದುವರಿದಿದ್ದು, ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಬಂಧನಗಳಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
- akhilesh yadav ram mandir statement
- anukalp mishra
- ayodhya police case
- ayodhya ram mandir
- bhasha nyaya sanhita
- champat rai
- fir against 8 in ayodhya
- ram mandir donation row
- ram mandir donation scam
- shri ram janmabhoomi teerth kshetra trust
- sit report ram mandir
- tinnu yadav
- up political news
- ಅಖಿಲೇಶ್ ಯಾದವ್ ಹೇಳಿಕೆ
- ಅನುಕಲ್ಪ್ ಮಿಶ್ರಾ
- ಅಯೋಧ್ಯೆ ಎಫ್ಐಆರ್
- ಅಯೋಧ್ಯೆ ರಾಮಮಂದಿರ
- ಉತ್ತರ ಪ್ರದೇಶ ರಾಜಕೀಯ ಸುದ್ದಿ
- ಎಸ್ಐಟಿ ವರದಿ ರಾಮಮಂದಿರ
- ಚಂಪತ್ ರಾಯ್
- ಟಿನ್ನು ಯಾದವ್
- ರಾಮ ಜನ್ಮಭೂಮಿ ಟ್ರಸ್ಟ್ ವಂಚನೆ
- ರಾಮಮಂದಿರ ಕಾಣಿಕೆ ದುರುಪಯೋಗ
- ರಾಮಮಂದಿರ ದೇಣಿಗೆ ಹಗರಣ





Leave a comment