ಬೆಂಗಳೂರು: Rashtriya Swayamsevak Sangh (RSS) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ವಿರುದ್ಧದ ಖಾಸಗಿ ಮಾನನಷ್ಟ ಮೊಕದ್ದಮೆಯನ್ನು ಬೆಂಗಳೂರಿನ ನ್ಯಾಯಾಲಯವೊಂದು ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಾಯಕರಿಗೂ ಜುಲೈ 21 ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಇದೇ ದೂರಿನಲ್ಲಿ ಹೆಸರಿಸಲಾಗಿದ್ದ ಮತ್ತೊಬ್ಬ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ನ್ಯಾಯಾಲಯವು ರಿಲೀಫ್ ನೀಡಿದ್ದು, ಅವರ ಮೇಲಿನ ದೂಗನ್ನು ಕೈಬಿಟ್ಟಿದೆ.
ತೇಜಸ್ ಎ. ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ಪರಿಶೀಲಿಸಿದ ಬೆಂಗಳೂರು ನಗರದ XLII ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ಆದೇಶವನ್ನು ಹೊರಡಿಸಿದೆ. ಭಾರತೀಯ ನ್ಯಾಯ ಸಂಹಿತೆ (BNS), 2023 ರ ಸೆಕ್ಷನ್ 356 ರ ಅಡಿಯಲ್ಲಿ ಅಪರಾಧವನ್ನು ಪರಿಗಣಿಸಿರುವ ನ್ಯಾಯಾಲಯ, ಇದನ್ನು ಕ್ರಿಮಿನಲ್ ಮೊಕದ್ದಮೆಯಾಗಿ ದಾಖಲಿಸಲು ಸೂಚಿಸಿದೆ.
ಪ್ರಕರಣದ ಮೊದಲ ಆರೋಪಿಯಾಗಿರುವ ಪ್ರಿಯಾಂಕ್ ಖರ್ಗೆ ಹಾಗೂ ಮೂರನೇ ಆರೋಪಿಯಾಗಿರುವ ಮೊಹಮ್ಮದ್ ನಲಪಾಡ್ ಮುಂಬರುವ ಜುಲೈ 21, 2026 ರಂದು ವಿಚಾರಣೆಗೆ ಹಾಜರಾಗಬೇಕಿದೆ.
ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ, ಎರಡನೇ ಆರೋಪಿಯಾಗಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ವಿರುದ್ಧದ ಪ್ರಕ್ರಿಯೆಗಳನ್ನು ನ್ಯಾಯಾಲಯವು ಆರಂಭಿಕ ಹಂತದಲ್ಲೇ ಕೈಬಿಟ್ಟಿದ್ದರೂ, ಅದಕ್ಕೆ ನಿಖರವಾದ ಕಾರಣಗಳನ್ನು ಆದೇಶದಲ್ಲಿ ವಿಸ್ತಾರವಾಗಿ ಉಲ್ಲೇಖಿಸಿಲ್ಲ. ಸದ್ಯ ಈ ಪ್ರಕರಣವು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
- Bengaluru Court
- Bharatiya Nyaya Sanhita Section 356
- Dinesh Gundu Rao
- Karnataka Congress Leaders News
- Mohammed Nalpad Court Summons
- Priyank Kharge RSS Defamation Case
- RSS Defamation Case Bengaluru
- ಆರ್ಎಸ್ಎಸ್ ಮಾನನಷ್ಟ ಮೊಕದ್ದಮೆ
- ಕರ್ನಾಟಕ ರಾಜಕೀಯ ಸುದ್ದಿ
- ಜುಲೈ 21 ಕೋರ್ಟ್ ಹಾಜರಾತಿ
- ದಿನೇಶ್ ಗುಂಡೂರಾವ್
- ಪ್ರಿಯಾಂಕ್ ಖರ್ಗೆ
- ಬೆಂಗಳೂರು ನ್ಯಾಯಾಲಯ ಸಮನ್ಸ್
- ಮೊಹಮ್ಮದ್ ನಲಪಾಡ್





Leave a comment