SUDDIKSHANA KANNADA NEWS/ DAVANAGERE/ DATE:07-01-2025
ದಾವಣಗೆರೆ: ನಾವು ಪಾಲಿಕೆಯ ಯಾವ ಸದಸ್ಯರಿಗೂ ಬಿಜೆಪಿ ಪಕ್ಷದವರಂತೆ ತಾರತಮ್ಯ ಮಾಡುವುದಿಲ್ಲ ಎಂದು ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಮಹಾನಗರ ಪಾಲಿಕೆ ಆವರಣದಲ್ಲಿ ವಿವಿಧ ವಾರ್ಡ್ ಗಳಲ್ಲಿ ಕೈಗೊಳ್ಳಲಾದ ರೂ.8.05 ಕೋಟಿ ಮೊತ್ತದ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ 500 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳ ವಿತರಣೆ, ಘನತ್ಯಾಜ್ಯ ನಿರ್ವಹಣೆಗಾಗಿ 10 ಟ್ರ್ಯಾಕ್ಟರ್ ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಪಾಲಿಕೆಯ ಬಿಜೆಪಿಯ ಆಡಳಿತದಲ್ಲಿ ಬಿಜೆಪಿ ಸದಸ್ಯರಿಗೆ ಒಂದು ಕೋಟಿ ಅನುದಾನ ನೀಡಿದರೆ ಕಾಂಗ್ರೆಸ್ ಸದಸ್ಯರಿಗೆ ಐದು ಲಕ್ಷ ಅನುದಾನ ನೀಡುತ್ತಿದ್ದರು. ನಾವು ಹಾಗೇ ಮಾಡುವುದಿಲ್ಲ. ಎಲ್ಲಾ ಸದಸ್ಯರುಗಳನ್ನು ಒಗ್ಗೂಡಿಸಿಕೊಂಡು ಹೋಗುತ್ತೇವೆ. ಎಲ್ಲಾ ಸದಸ್ಯರುಗಳು ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಸಚಿವರು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರಾದ ರೇಣುಕಾ, ಮೇಯರ್ ಕೆ.ಚಮನ್ ಸಾಬ್, ಉಮಪೇಯರ್ ಸೋಗಿ ಶಾಂತ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಆಶಾ ಉಮೇಶ್, ಸವಿತಾ ಗಣೇಶ್ ಹುಲ್ಮನೆ, ಸುಧಾ ಇಟ್ಟಿಗುಡಿ ಮಂಜುನಾಥ್, ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಏ.ನಾಗರಾಜ್, ರಹೀಂ ಖಾನ್, ಉದಯ್ ಕುಮಾರ್, ಪಾಮೇನಹಳ್ಳಿ ನಾಗರಾಜ್, ಎಲ್.ಡಿ ಗೋಣೆಪ್ಪ, ಕೆ.ಎನ್ ವೀರೇಶ್, ಜಾಕೀರ್ ಅಲಿ, ನಾಮನಿರ್ದೇಶನರಾದ ಸದಸ್ಯ ಸಾಗರ್ ಎಲ್.ಎಂ ಹೆಚ್, ರುದ್ರೇಶ್ ಇತರರು ಉಪಸ್ಥಿತರಿದ್ದರು.