Home ದಾವಣಗೆರೆ BIG BREAKING: ವಂದೇ ಮಾತರಂ ಗೀತೆಗೆ ಅಪಮಾನ ಆರೋಪ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

BIG BREAKING: ವಂದೇ ಮಾತರಂ ಗೀತೆಗೆ ಅಪಮಾನ ಆರೋಪ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!

Share
ರಾಹುಲ್ ಗಾಂಧಿ
Share

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆ ಗಾಯನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ (FIR) ದಾಖಲಿಸುವಂತೆ ಕೋರಿ ದೆಹಲಿ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ.

ವಕೀಲರಾದ ಕುನಾಲ್ ವಿನಾಯಕ್ ಹಾಗೂ ಶುಭ್ ಶರ್ಮಾ ಎಂಬುವರು ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಮಸೂದೆ, 2026’ ರ ನಿಯಮಗಳ ಅಡಿಯಲ್ಲಿ ಪರಿಶೀಲನೆ ನಡೆಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ದೂರಿನಲ್ಲಿ ಏನಿದೆ?

ಸೋನಿಯಾ ಗಾಂಧಿ ಸನ್ನೆ: ವಂದೇ ಮಾತರಂ ಗೀತೆಯ ಆರಂಭಿಕ ಸಾಲುಗಳ ನಂತರ ಮುಂದಿನ ಚರಣಗಳನ್ನು ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಸನ್ನೆಗಳನ್ನು ಮಾಡಿದರು ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿ ಹೇಳಿಕೆ: ವಿಡಿಯೋ ತುಣುಕೊಂದರಲ್ಲಿ ರಾಹುಲ್ ಗಾಂಧಿ “ನಾವು ವಂದೇ ಮಾತರಂ ಹಾಡುತ್ತಿಲ್ಲ” ಎಂದು ಹೇಳಿರುವುದು ದಾಖಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಕ್ರಮ: ನೂತನ ಮಸೂದೆಯ ಅನ್ವಯ ರಾಷ್ಟ್ರಗೀತೆ ಅಥವಾ ರಾಷ್ಟ್ರೀಯ ಗೀತೆಗೆ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶವಿದೆ.

ಈ ಕುರಿತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಜನರ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಆದರೆ, ಈ ಆರೋಪಗಳನ್ನು ನಿರಾಕರಿಸಿರುವ ಕಾಂಗ್ರೆಸ್, ಪೂರ್ಣ ಆವೃತ್ತಿಯ ಗಾಯನವನ್ನು ತಡೆಯುವ ಯಾವುದೇ ಉದ್ದೇಶವಿರಲಿಲ್ಲ ಎಂದು ಸ್ಪಷ್ಟನೆ ನೀಡಿದೆ. ಸದ್ಯ ದೆಹಲಿ ಪೊಲೀಸರು ಈ ದೂರಿನ ಕುರಿತು ಪ್ರಾಥಮಿಕ ಪರಿಶೀಲನೆ ಆರಂಭಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *