Home ದಾವಣಗೆರೆ ದಾವಣಗೆರೆ ಹಿಂದೂ ಮಹಾಗಣಪತಿ ಉತ್ಸವ: ಹಂದರ ಕಂಬ ಪೂಜೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಚಾಲನೆ
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಹಿಂದೂ ಮಹಾಗಣಪತಿ ಉತ್ಸವ: ಹಂದರ ಕಂಬ ಪೂಜೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಚಾಲನೆ

Share
ದಾವಣಗೆರೆ
Share

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿ ವರ್ಷ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುವ ಗಣೇಶೋತ್ಸವದ ಪ್ರಮುಖ ಸಿದ್ಧತೆಗಳಿಗೆ ಇಂದು ಚಾಲನೆ ನೀಡಲಾಯಿತು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಗಣೇಶೋತ್ಸವ ಮಂಟಪ ನಿರ್ಮಾಣದ ಅಂಗವಾಗಿ ಆಯೋಜಿಸಲಾಗಿದ್ದ ‘ಹಂದರ ಕಂಬ ಪೂಜೆ’ಯನ್ನು ಸಂಪ್ರದಾಯಬದ್ಧವಾಗಿ ಹಾಗೂ ಅತ್ಯಂತ ಶ್ರದ್ಧಾ-ಭಕ್ತಿಯಿಂದ ನೆರವೇರಿಸಿದರು.

ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಶಿವಯೋಗಿಸ್ವಾಮಿ, ಜೊಳ್ಳಿ ಗುರು, ಜಯಪ್ರಕಾಶ್ ಮಾಗಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್, ಚೇತನಾ ಶಿವಕುಮಾರ್, ದಿನೇಶ್ ಕೆ. ಶೆಟ್ಟಿ, ನಾಗರಾಜ್, ಮಲ್ಲಿಕಾರ್ಜುನ್ ಮತ್ತಿತರರು ಹಾಜರಿದ್ದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದು, ಈ ಬಾರಿಯ ಉತ್ಸವವು ಶಾಂತಿ ಮತ್ತು ವಿಜೃಂಭಣೆಯಿಂದ ನೆರವೇರಲಿ ಎಂದು ಶುಭ ಹಾರೈಸಿದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles