ಬೆಂಗಳೂರು: ಕಾರಾಗೃಹಗಳ ಭದ್ರತೆಗೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ಸಿಗಲಿದೆ.
2026 – 27ರ ಬಜೆಟ್ ಘೋಷಣೆಯಂತೆ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ “ಆಪರೇಷನ್ ಶುದ್ದೀಕರಣ”ದ ಅಡಿಯಲ್ಲಿ ಈ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಮೊಬೈಲ್, ಮಾದಕವಸ್ತುಗಳು ಹಾಗೂ ಇನ್ನಿತರ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು Artificial Intrusion Detection System, ಸಿಸಿಟಿವಿ, ಬಾಡಿವೋರ್ನ್ ಕ್ಯಾಮೆರಾ, Infrared(IR) ಸಿಸಿಟಿವಿ ಕ್ಯಾಮೆರಾಗಳು,
X-Ray Baggage Scanner ಗಳು ಸೇರಿದಂತೆ ಇನ್ನಿತರ ಅತ್ಯಾಧುನಿಕ ಭದ್ರತಾ ತಪಾಸಣಾ ಉಪಕರಣಗಳನ್ನು ₹20 ಕೋಟಿ ವೆಚ್ಚದಲ್ಲಿ ಖರೀದಿಸುವ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಾರಗೃಹಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದಕ್ಕೆ ಮತ್ತು ಭದ್ರತೆಯನ್ನು ಹೆಚ್ಚಿಸುವುದಕ್ಕೆ ಈ ಯೋಜನೆಯು ಪರಿಣಾಮಕಾರಿಯಾಗಿ ಪ್ರಯೋಜನವಾಗಲಿದೆ ಎಂದಿದ್ದಾರೆ.





Leave a comment