SUDDIKSHANA KANNADA NEWS/ DAVANAGERE/ DATE:06-02-2025
ದಾವಣಗೆರೆ: ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ.
ಪುಸ್ತಕ ಮಾರಾಟಕ್ಕೆ ಮಳಿಗೆ ಅವಶ್ಯವಿರುವ ಪ್ರಕಾಶಕರು, ಮಾರಾಟಗಾರರು ಭರ್ತಿ ಮಾಡಿದ ಅರ್ಜಿಯನ್ನು ರೂ.1000 ಡಿ.ಡಿ ಯೊಂದಿಗೆ ಫೆಬ್ರವರಿ 12 ರೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ,
ವಿಧಾನಸೌಧ ಬೆಂಗಳೂರು-560001 ಇಲ್ಲಿಗೆ ಸಲ್ಲಿಸಲು ಕರ್ನಾಟಕ ವಿಧಾನಸಭೆ ಸಚಿವಾಲಯದ ಮುಖ್ಯ ಗ್ರಂಥಾಪಾಲಕರಾದ ಕನಕಪ್ಪ ನಲವಾಗಲ ತಿಳಿಸಿದ್ದಾರೆ.