SUDDIKSHANA KANNADA NEWS/ DAVANAGERE/ DATE:10-02-2025
ದಾವಣಗೆರೆ: ಹರಿಹರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದ 124 ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುವ 58,335 ಅಂತ್ಯೋದಯ ಅನ್ನ ಯೋಜನೆ ಮತ್ತು ಅದತ್ಯಾ ಬಿ.ಪಿ.ಎಲ್ ಪಡಿತರ ಚೀಟಿಗಳಲ್ಲಿನ
ಒಟ್ಟು ಸದಸ್ಯರ ಪೈಕಿ 7567 ಅಂತ್ಯೋದಯ ಅನ್ನ ಯೋಜನೆ ಮತ್ತು ಆದತ್ಯಾ ಬಿ.ಪಿ.ಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಮಾಡಲು ಬಾಕಿ ಇರುತ್ತದೆ.
ಬಾಕಿ ಇರುವ 7567 ಸದಸ್ಯರುಗಳು ಕೂಡಲೇ ಇ-ಕೆವೈಸಿಯನ್ನು ಪ್ರತಿ ದಿನ ಬೆಳಗ್ಗೆ 7 ರಿಂದ ಸಂಜೆ 8 ಗಂಟೆಯವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಅಥವಾ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪೋರ್ಟಬಲಿಟಿ ಮೂಲಕ ಇ-ಕೆವೈಸಿಯನ್ನು ಉಚಿತವಾಗಿ ಮಾಡಿಕೊಳ್ಳಬಹುದೆಂದು ಹರಿಹರ ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ.