• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ದಾವಣಗೆರೆಯಲ್ಲಿ 6,000ಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ವಶ: ಮಳೆಗಾಲದವರೆಗೆ ಮುಂದೂಡುವಂತೆ ಸಚಿವರ ಆಪ್ತ ದಿನೇಶ್ ಕೆ. ಶೆಟ್ಟಿ ಆಗ್ರಹ!

Editor by Editor
February 26, 2025
in ದಾವಣಗೆರೆ, ಬೆಂಗಳೂರು
0
ದಾವಣಗೆರೆಯಲ್ಲಿ 6,000ಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ವಶ: ಮಳೆಗಾಲದವರೆಗೆ ಮುಂದೂಡುವಂತೆ ಸಚಿವರ ಆಪ್ತ ದಿನೇಶ್ ಕೆ. ಶೆಟ್ಟಿ ಆಗ್ರಹ!

SUDDIKSHANA KANNADA NEWS/ DAVANAGERE/ DATE:26-02-2025

ದಾವಣಗೆರೆ: ದಾವಣಗೆರೆಯಲ್ಲಿ ಹಾಫ್ ಹೆಲ್ಮೆಟ್ ಮತ್ತು ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳ ವಶ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ ಬರೋಬ್ಬರಿ ಆರು ಸಾವಿರಕ್ಕೂ ಹೆಚ್ಚು ಗುಣಮಟ್ಟವಲ್ಲದ ಹೆಲ್ಮೆಟ್ ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆದ್ರೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅತ್ಯಾಪ್ತ ಹಾಗೂ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೇಸಿಗೆ ಕಾಲವಿದ್ದು, ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿರುವುದರಿಂದ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಬೇಸಿಗೆ ಕಾಲ ಮುಗಿದ ಬಳಿಕ ಅಂದರೆ ಮಳೆಗಾಲದಿಂದ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಫೆ. 27ರಂದು ಸಂಜೆ 5 ಗಂಟೆಗೆ ನಗರದ ಹೈ ಸ್ಕೂಲ್ ಮೈದಾನದಲ್ಲಿರುವ ಬ್ಯಾಸ್ಕೆಟ್ ಬಾಲ್ ಗ್ರೌಂಡಿನಲ್ಲಿ ಬೇಸಿಗೆಗಾಲದಲ್ಲಿ ಹೆಲ್ಮೆಟ್ ಹಾಕುವುದು ಕಡ್ಡಾಯ ಮಾಡಿರುವ ಕುರಿತು ಸಮಾಲೋಚನ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ದಿನೇಶ್ ಕೆ. ಶೆಟ್ಟಿ ಮನವಿ ಮಾಡಿದ್ದಾರೆ.

ದಾವಣಗೆರೆ ವಾಹನ ಚಾಲಕರಿಗೆ ಬಹಳ ತೊಂದರೆ ಆಗುತ್ತಿರುವುದರಿಂದ ಮಳೆಗಾಲದ ತನಕ ಮುಂದೂಡಬೇಕೆಂದು ಮನವಿ ಪತ್ರವನ್ನು ಕೊಡಲಾಗುವುದು. ಹೆಚ್ಚಿನ ಸಂಖ್ಯೆ ಜನರು ಬಂದರೆ ಮುಂದೂಡಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ನಿಲ್ಲದ ಕಾರ್ಯಾಚರಣೆ: ಹಾಫ್ ಹೆಲ್ಮೆಟ್, ಐಎಸ್ಐ ಮಾರ್ಕ್ ಇಲ್ಲದ, ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದಕ್ಕೆ ಬ್ರೇಕ್ ಹಾಕುವ ಕಾರ್ಯಾಚರಣೆ ಇಂದೂ ಮುಂದುವರಿದಿದೆ. ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಫ್ ಹೆಲ್ಮೆಟ್, ಗುಣಮಟ್ಟ ಇಲ್ಲದ ಕಾಟಾಚಾರಕ್ಕೆ ಎಂಬಂತೆ ಧರಿಸಿ ವಾಹನ ಚಲಾಯಿಸುವವರಿಗೆ ಇನ್ಮುಂದೆ ದಂಡ ಬೀಳುವುದು ಫಿಕ್ಸ್. ಈಗಾಗಲೇ ಆರು ಸಾವಿರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್, ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಶುಕ್ರವಾರದಿಂದ ಆರಂಭವಾಗಿರುವ ಹಾಫ್ ಹೆಲ್ಮೆಟ್ ಕಾರ್ಯಾಚರಣೆ ಬುಧವಾರವೂ ಮುಂದುವರಿದಿತ್ತು. ದಾವಣಗೆರೆ ನಗರದಲ್ಲಿ ಬರೋಬ್ಬರಿ ಆರು ಸಾವಿರ ಹಾಫ್ ಹೆಲ್ಮೆಟ್ ಮತ್ತು ಗುಣಮಟ್ಟಇಲ್ಲದ ಹೆಲ್ಮೆಟ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋಟಾರ್ ಸೈಕಲ್ ಚಾಲಕರಿಗೆ ನಗರದ ಪ್ರಮುಖ ವೃತ್ತಗಳಾದ ಜಯದೇವ ವೃತ್ತ, ಅಂಬೇಡ್ಕರ್ ವೃತ್ತ, ಅರುಣಾ ಥಿಯೇಟರ್, ಸಂಗೊಳ್ಳಿ ರಾಯಣ್ಣ, ಎಸಿ ವೃತ್ತ, ಎಂ ಜಿ ವೃತ್ತ, ಗಡಿಯಾರ ಕಂಬ ವೃತ್ತಗಳಲ್ಲಿ ಹಾಫ್ ಹೆಲ್ಮೆಟ್, ಕಳಪೆ ಗುಣಮಟ್ಟದ ಹೆಲ್ಮೆಟ್ ಮತ್ತು ಪ್ಲಾಸ್ಟಿಕ್ ಹೆಲ್ಮೆಟ್ ಹಾಕಿಕೊಂಡು ಸಂಚರಿಸುವ ಮೋಟಾರ್ ಸೈಕಲ್ ಚಾಲಕರಿಗೆ ಸುರಕ್ಷಿತಾ ದೃಷ್ಟಿಯಿಂದ ಅವುಗಳನ್ನು ಧರಿಸದಂತೆ ಸೂಚನೆ ನೀಡಲಾಯಿತು.

ಪ್ಲಾಸ್ಟಿಕ್ ಹೆಲ್ಮೆಟ್ / ಹಾಫ್ ಹೆಲ್ಮೆಟ್ ಬದಲಾಗಿ ಐಎಸ್ಐ ಗುಣಮಟ್ಟದ ಸುರಕ್ಷಿತಾ ಹೆಲ್ಮೆಟ್ ಗಳನ್ನು ಧರಿಸಿ ಮೋಟಾರ್ ಸೈಕಲ್ ಚಲಾಯಿಸಿ ಅಪಘಾತದಂತ ಸಂದರ್ಭದಲ್ಲಿ ತಮ್ಮ ಜೀವನ ಹಾನಿಯನ್ನು ತಡೆಯಬೇಕು ಎಂದು ಅರಿವು ಮೂಡಿಸಲಾಯಿತು.

ಕಳೆದೆರಡು ದಿನಗಳಲ್ಲಿ ಸುಮಾರು 6000ಕ್ಕೂ ಹೆಚ್ಚು ಪ್ಲಾಸ್ಟಿಕ್, ಹಾಫ್ ಹೆಲ್ಮೆಟ್ ಗಳನ್ನು ನಾಶಪಡಿಸುವ ಸಲುವಾಗಿ ವಶಕ್ಕೆ ಪಡೆಯಲಾಯಿತು. ಕೇವಲ ಈ ಬಾರಿ ಐಎಸ್ಐ ಮಾರ್ಕ್ ಇರುವ ಗುಣಮಟ್ಟದ ಹೆಲ್ಮೆಟ್ ತಂದು ಧರಿಸಿದವರಿಗೆ ಹಾಗೂ
ಪ್ಲಾಸ್ಟಿಕ್ ಹೆಲ್ಮೆಟ್, ಹಾಫ್ ಹೆಲ್ಮೆಟ್ ಅನ್ನು ಅರಿತುಕೊಂಡು ವಶಕ್ಕೆ ನೀಡಿದವರಿಗೆ ಮಾತ್ರ ದಂಡ ವಿಧಿಸದೆ ತಿಳುವಳಿಕೆ ನೀಡಿ ಹಾಗೆ ಕಳುಹಿಸಲಾಯಿತು.

ಈ ವಿಶೇಷ ಕಾರ್ಯಚರಣೆಯು ಸೋಮವಾರ ಮತ್ತು ಮಂಗಳವಾರವೂ ವೇಗವಾಗಿ ಮುಂದುವರಿದಿದೆ. ಐಎಸ್ಐ ಮಾರ್ಕ್ ಇಲ್ಲದ ಕಳಪೆ, ಹಾಫ್ ಮತ್ತು ಪ್ಲಾಸ್ಟಿಕ್ ಹೆಲ್ಮೆಟ್ ಧರಿಸಿ ಮೋಟಾರ್ ಸೈಕಲ್ ಓಡಿಸುವ ಚಾಲಕರಿಗೆ ದಂಡ ವಿಧಿಸುವುದು ಖಚಿತ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.

ಎಸ್ಪಿ ಉಮಾ ಪ್ರಶಾಂತ್ ಅವರ ಸೂಚನೆಯಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ್ ಮತ್ತು ಜಿ. ಮಂಜುನಾಥ ಹಾಗೂ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಅವರ ಮಾರ್ಗದರ್ಶನದಲ್ಲಿ ದಾವಣಗೆರೆ ನಗರ ಸಂಚಾರ ಪೊಲೀಸ್ ಸಿಪಿಐ ನಲವಾಗಲು ಮಂಜುನಾಥ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Next Post
ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ: 5800 ಹೊಸ ಬಸ್ ಗಳ ಸೇರ್ಪಡೆಗೆ ಅನುಮೋದನೆ, 4891 ಬಸ್ ಗಳ ಖರೀದಿ!

ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ: 5800 ಹೊಸ ಬಸ್ ಗಳ ಸೇರ್ಪಡೆಗೆ ಅನುಮೋದನೆ, 4891 ಬಸ್ ಗಳ ಖರೀದಿ!

Leave a Reply Cancel reply

Your email address will not be published. Required fields are marked *

Recent Posts

  • ಆಪರೇಷನ್ ಸಿಂಧೂರ ನಡೆದ ದಿನ ಜನಿಸಿದ ಮಗುವಿಗೆ “ಸಿಂಧೂರಿ” ಹೆಸರಿಟ್ಟ ದಂಪತಿ!
  • ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಗೆ ಸಾನಿಯಾ ಮಿರ್ಜಾ ಬಹುಪರಾಕ್!
  • ಪಾಕಿಸ್ತಾನದ ಹಲವು ನೆಲೆಗಳು ಉಡೀಸ್, 50 ಡ್ರೋಣ್ ಗಳು ಪೀಸ್ ಪೀಸ್!
  • ಪಾಕಿಸ್ತಾನದ F-16 ಮತ್ತು ಎರಡು JF-17 ವಿಮಾನ ಹೊಡೆದುರುಳಿಸಿದ ಭಾರತ!
  • ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ: ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In