Home ದಾವಣಗೆರೆ ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರದ ಯೋಜನೆ: ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ!
ದಾವಣಗೆರೆಬೆಂಗಳೂರುವಾಣಿಜ್ಯ

ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರದ ಯೋಜನೆ: ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ!

Share
ಉಪ್ಪಾರ
Share

ದಾವಣಗೆರೆ: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿಯಮಿತ) – ಸಾಲ ಮತ್ತು ಸಹಾಯಧನ ಯೋಜನೆಗಳ ಮುಖ್ಯಾಂಶಗಳು

ದಾವಣಗೆರೆ ಜಿಲ್ಲೆಯ ಉಪ್ಪಾರ ಸಮುದಾಯದ ಅರ್ಹ ಫಲಾನುಭವಿಗಳಿಂದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಖ್ಯ ವಿವರಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30

  • ಅರ್ಜಿ ಸಲ್ಲಿಸುವ ವಿಧಾನ: ಸೇವಾ ಸಿಂಧು ಪೋರ್ಟಲ್ ಮೂಲಕ (ಗ್ರಾಮ ಒನ್, ಕರ್ನಾಟಕ ಒನ್, ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ)

ಅರ್ಹತೆ ಮತ್ತು ನಿಯಮಗಳು:

  • ಈ ಹಿಂದೆ ನಿಗಮದ ಯಾವುದೇ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅಥವಾ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಸಂಪರ್ಕ ಮತ್ತು ಹೆಚ್ಚಿನ ಮಾಹಿತಿ:

  • ಅಧಿಕೃತ ವೆಬ್‌ಸೈಟ್: upparadevelopment.karnataka.gov.in

  • ದೂ.ಸಂಖ್ಯೆ (ದಾವಣಗೆರೆ ಜಿಲ್ಲಾ ಕಚೇರಿ): 08192-230934

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://upparadevelopment.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *