ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪೊಲೀಸರ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು..!

On: March 27, 2025 9:16 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-03-2025

ದಾವಣಗೆರೆ: ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಪಿ. ಗೊಲ್ಲರಹಳ್ಳಿಯ ನವೀನ್ (31) ಕಾಲಿಗೆ ಗುಂಡು ತಗುಲಿದ್ದು, ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದರೋಡೆ ಪ್ರಕರಣದ ಆರೋಪಿಯಾದ ನವೀನ್ ನನ್ನು ಸ್ಥಳ ಮಹಜರುಗೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಿ ತಪ್ಪಿಸಿಕೊಳ್ಳಲು ನವೀನ್ ಯತ್ನಿಸಿದ್ದಾನೆ.

ಬುಧವಾರ ರಾತ್ರಿ ಸ್ಥಳ ಮಹಜರು ಮಾಡಲು ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯ ಸಿಪಿಐ ಶಿಲ್ಪಾ ನೇತೃತ್ವದ ತಂಡವು ಮುಂದಾಗಿತ್ತು. ಈ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ ಆರೋಪಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮನವಿ ಮಾಡಿದರೂ ಕೇಳಿಲ್ಲ. ಕಲ್ಲು ಎಸೆಯುವುದನ್ನು ಮುಂದುವರಿಸಿದ್ದಾನೆ. ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಲಾಗಿದೆ. ಆದರೂ ಕೇಳಿಲ್ಲ. ಈ ವೇಳೆ ಸಿಪಿಐ ಶಿಲ್ಪಾ ಹಾಗೂ ಕಾನ್ ಸ್ಟೇಬಲ್ ಚಂದ್ರಶೇಖರ್ ಗಾಯಗೊಂಡರು. ಕೂಡಲೇ ಪಿಸ್ತೂಲ್ ತೆಗೆದ ಶಿಲ್ಪಾ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

ಅತ್ಯಾಚಾರ, ಕೊಲೆ, ದರೋಡೆ ಸೇರಿದಂತೆ ಆರೋಪಿ ವಿರುದ್ದ 51 ಪ್ರಕರಣಗಳು ದಾಖಲಾಗಿದ್ದು, ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದು ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ. ಈತ ಹಿನ್ನೆಲೆಯೇ ಭಯಾನಕವಾಗಿದ್ದು,ಆರೋಪಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment