ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಜಲಾಶಯ(Bhadra Dam)ದಿಂದ ಭದ್ರಾ ಬಲದಂಡೆ ನಾಲೆ ನೀರು ಬಂದ್: ಅಂತೂ ಇಂತೂ ಆನ್ ಅಂಡ್ ಆಫ್ ಜಾರಿ, ದಾವಣಗೆರೆ ಜಿಲ್ಲೆಯ ರೈತರ ಆಕ್ರೋಶ

On: September 16, 2023 3:37 AM
Follow Us:
BHADRA DAM
---Advertisement---

SUDDIKSHANA KANNADA NEWS/ DAVANAGERE/ DATE:16-09-2023

ದಾವಣಗೆರೆ: ಭದ್ರಾ ಡ್ಯಾಂ (Bhadra Dam)ನಲ್ಲಿ ನೀರು ಸಂಗ್ರಹ ಕಡಿಮೆ ಆದ ಕಾರಣಕ್ಕೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ನಿಲ್ಲಿಸಲು ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

50 ಸಾವಿರ ದಾಟಿದ ಅಡಿಕೆ: ಚನ್ನಗಿರಿ(Channagiri)ಯಲ್ಲಿ 15 ಕ್ವಿಂಟಾಲ್ ಅಡಿಕೆ ಕಳ್ಳತನ ಮಾಡಿದ್ದ ಆರೋಪಿ ಸೆರೆ, ಅಡಿಕೆ ಕಾಯೋದೇ ದೊಡ್ಡ ಸಮಸ್ಯೆ…!

ಶಿವಮೊಗ್ಗದಲ್ಲಿ ನಡೆದ ಕಾಡಾ ಸಭೆಯಲ್ಲಿ ಸೆ. 7ರಿಂದಲೇ ಎಡದಂಡೆ ನಾಲೆಯಲ್ಲಿ ನೀರು ಹೊರಬಿಡುವಿಕೆ ಸ್ಥಗಿತಗೊಂಡಿತ್ತು. ಈಗ ಬಲದಂಡೆ ನಾಲೆಯಲ್ಲಿ ನೀರು ನಿಲುಗಡೆ ಮಾಡಿರುವುದಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶದ ದಾವಣಗೆರೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭದ್ರಾ ಡ್ಯಾಂ (Bhadra Dam)ನ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಿಗೆ ಈ ಹಂಗಾಮಿನಲ್ಲಿ ನೂರು ದಿನ ಹರಿಸಲು ನಿರ್ಧರಿಸಲಾಗಿತ್ತು. ಆದ್ರೆ, ಈಗ ಆನ್ ಅಂಡ್ ಆಫ್ ವ್ಯವಸ್ಥೆ ಜಾರಿಗೊಳಿಸಲು ನೀರಾವರಿ ಸಲಹಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಭದ್ರಾ ಅಚ್ಚುಕಟ್ಟು ಪ್ರದೇಶದಾಭಿವೃದ್ಧಿ ಪ್ರಾಧಿಕಾರವೂ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ದಾವಣಗೆರೆ ಭಾಗದಲ್ಲಿ ಭತ್ತ ಬಿತ್ತನೆ ಮಾಡಿದ್ದ ರೈತರು ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಲದಂಡೆ ನಾಲೆಯಲ್ಲಿ ನೀರು ನಿಲ್ಲಿಸುವುದು ಯಾವಾಗ?

  • ಸೆಪ್ಟಂಬರ್ 16ರಿಂದ 25ರವರೆಗೆ 10 ದಿನಗಳ ಕಾಲ ನೀರು ನಿಲ್ಲಿಸಲಾಗುತ್ತದೆ.
  • ಅ. 16ರಿಂದ ಅ. 25ರವರೆಗೆ ಹತ್ತು ದಿನಗಳ ಕಾಲ ನೀರು ಬಂದ್

ಬಲದಂಡೆಯಲ್ಲಿ ನೀರು ಯಾವಾಗ ಹರಿಸಲಾಗುತ್ತೆ?

  • ಸೆ. 26ರಿಂದ ಅ. 15ರವರೆಗೆ 20 ದಿನಗಳ ಕಾಲ ನೀರು ಹರಿಸಲಾಗುತ್ತದೆ.
  • ಅ. 26ರಿಂದ ನವೆಂಬರ್ 17ರವರೆಗೆ 23 ದಿನಗಳವರೆಗೆ ನೀರು ಹರಿಸಲಾಗುತ್ತೆ.

ಎಡದಂಡೆ ನಾಲೆಯಲ್ಲಿ ನೀರು ಸ್ಥಗಿತ ಯಾವಾಗ..?

  • ಸೆ. 7ರಿಂದ ಸೆ. 16ರವರೆಗೆ ಹತ್ತು ದಿನಗಳ ಕಾಲ ನೀರು
  • ಅ. 2 ರಿಂದ 11ರವರೆಗೆ ಹತ್ತು ದಿನಗಳ ಕಾಲ ನೀರು ನಿಲುಗಡೆ
  • ಅ. 27ರಿಂದ ನವೆಂಬರ್ 5ರವರೆಗೆ 10 ದಿನಗಳ ಕಾಲ ನೀರು ಸ್ಥಗಿತ

ಎಡದಂಡೆ ನಾಲೆಯಲ್ಲಿ ನೀರು ಹರಿಸುವುದು ಯಾವಾಗ…?

  • ಸೆ. 17ರಿಂದ ಅ. 1ರವರೆಗೆ 15 ದಿನಗಳ ಕಾಲ ನೀರು ಹರಿಸಲಾಗುತ್ತದೆ.
  • ಅ. 12ರಿಂದ 26ರವರೆಗೆ 15 ದಿನಗಳ ಕಾಲ ನಾಲೆಯಲ್ಲಿ ನೀರು
  • ನ.6ರಿಂದ 17ರವರೆಗೆ 12 ದಿನಗಳ ಕಾಲ ನೀರು ಹರಿಸುವಿಕೆ

ಪ್ರತಿನಿತ್ಯ ಬಲದಂಡೆ ನಾಲೆಯಲ್ಲಿ 2300 ಕ್ಯೂಸೆಕ್ ನೀರನ್ನು ಹರಿಬಿಡಲಾಗುತಿತ್ತು. ಅದನ್ನು ಈಗ ಇಂದಿನಿಂದ ನಿಲ್ಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಲ್ಲಿನ
ಅಚ್ಚುಕಟ್ಟು ಪ್ರದೇಶ ಭದ್ರಾ ಎಡದಂಡೆ ನಾಲೆಯಲ್ಲಿ ಬರುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ಭದ್ರಾ ಬಲದಂಡೆ ನಾಲೆ ಇದೆ. 161 ಅಡಿಗೆ ಭದ್ರಾ ಜಲಾಶಯ (Bhadra Dam)ದ ನೀರಿನ ಮಟ್ಟ ಕುಸಿದಿದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ ಇದ್ದು, ಕಳೆದ ವರ್ಷ
ಇದೇ ಅವಧಿಯಲ್ಲಿ 184.1 ಅಡಿ ನೀರು ಸಂಗ್ರಹ ಇತ್ತು.

ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಕಾರಣ ಭದ್ರಾಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣ ತುಂಬಾನೇ ಕಡಿಮೆ ಇದೆ. ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಬರ ಪರಿಸ್ಥಿತಿ ಎದುರಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಜಲಾಶಯದಲ್ಲಿ ಸದ್ಯ 43.86 ಟಿಎಂಸಿ ನೀರಿದ್ದು, ಕುಡಿಯುವ ನೀರಿಗೋಸ್ಕರ 7 ಟಿಎಂಸಿ ನೀರಿಗೆ ಕಾಯ್ದಿರಿಸಲಾಗಿದೆ. ಹೂಳು, ಡೆಡ್ ಸ್ಟೋರೇಜ್ 13.83 ಟಿಎಂಸಿ ಹೊರತಾಗಿ ಕೃಷಿಗೆ 18 ಟಿಎಂಸಿ ನೀರು ಉಳಿಯುತ್ತದೆ. ಈ ನೀರನ್ನು ನವೆಂಬರ್ ವರೆಗೆ ನಾಲೆಗಳಿಗೆ ಹರಿಸಿದರೆ, ನಂತರ ಮೇ ಅಂತ್ಯದವರೆಗೆ ತೋಟದ ಬೆಳೆಗಳಿಗೆ ನೀರು ಇಲ್ಲದಂತಾಗುತ್ತದೆ.

ನೀರು ಉಳಿಸುವಂತೆ ಎಡದಂಡೆ ನಾಲೆ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ರೈತರು ಆಗ್ರಹಿಸಿ ಪ್ರತಿಭಟನೆಯನ್ನೂ ನಡೆಸಿದ್ದರು. ನೂರು ದಿನಗಳ ಕಾಲ ನೀರು ಹರಿಸಲು ನಿರ್ಧರಿಸಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಉಲ್ಟಾ ಹೊಡೆದಿದೆ.
ಮಾತ್ರವಲ್ಲ, ಆನ್ ಅಂಡ್ ಆಪ್ ವ್ಯವಸ್ಥೆ ಜಾರಿಗೊಳಿಸಲು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರ ಹೆಗಲಿಗೆ ವಹಿಸಲಾಗಿತ್ತು. ಈಗ ಭದ್ರಾ ಡ್ಯಾಂ ನೀರಿನ ಸಂಗ್ರಹದ ಲೆಕ್ಕಾಚಾರ ಇಟ್ಟುಕೊಂಡು ನೂರು ದಿನಗಳ ಕಾಲ ಸತತವಾಗಿ ನೀರು ಹರಿಸುವ ವಿಚಾರವನ್ನು ಸರ್ಕಾರ ಕೈ ಬಿಟ್ಟಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಈ ನೀರು ನಂಬಿ ಭತ್ತ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರದ ದ್ವಂದ್ವ ನಿರ್ಧಾರದಿಂದ ರೈತರು ಆತಂಕಕ್ಕೆ ಒಳಗಾಗುವಂತೆ
ಮಾಡಿದೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment