
SUDDIKSHANA KANNADA NEWS/ DAVANAGERE/ DATE:08-04-2025
ದಾವಣಗೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ದಾವಣಗೆರೆ ನಗರದ ಸಿದ್ಧಗಂಗಾ ಪಿಯು ಕಾಲೇಜು ರಾಜ್ಯಕ್ಕೆ ಐದನೇ ಸ್ಥಾನ ಪಡೆದು ಮತ್ತೊಮ್ಮೆ ತನ್ನ ಶೈಕ್ಷಣಿಕ ಸಾಧನೆಯ ಇತಿಹಾಸ ರಚಿಸಿದೆ.


600 ಕ್ಕೆ 595 ಅಂಕಗಳಿಸಿದ ರವಿಕಿರಣ ಎನ್, ಕನ್ನಡ 100, ಇಂಗ್ಲೀಷ್, 97, ಭೌತಶಾಸ್ತ್ರ 100, ರಸಾಯನ ಶಾಸ್ತ್ರ 99, ಜೀವಶಾಸ್ತ್ರ 100, ಗಣಿತ 99 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ, ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ, ಇವನು ನಾಗರಾಜ್ ಎಸ್ ಮತ್ತು ಸಿದ್ದಮ್ಮ ದಂಪತಿಗಳ ಪುತ್ರ ಚಿತ್ರದುರ್ಗ ಜಿಲ್ಲೆ ಉಪ್ಪನಾಯಕನಹಳ್ಳಿ ಊರಿನವನು. ಈ ಬಾಲಕ ಎಂ.ಎಸ್.ಎಸ್. ಸ್ಕಾಲರ್ಶಿಪ್ನಲ್ಲಿ ಎರಡು ವರ್ಷ ಉಚಿತ ವಿದ್ಯಾಭ್ಯಾಸ ಪಡೆದಿದ್ದಾನೆಂಬುದು ಉಲ್ಲೇಖನೀಯ.
ಉಳಿದಂತೆ ಹೆಚ್ಚು ಅಂಕಗಳಿಸಿರುವ, ಮನೋಜ್ ಎಲ್, ವಿನಯ್ ಕುಮಾರ್ ಆರ್, ಕೃತಿಕ ಕದಂ, ಚೇತನ ಆರ್, ಜೀವಿತ ಜೆ ಇಟಗಿ, ಸ್ನೇಹಲ್ ಕೆ ಕುಡ್ತೇಕರ್ , ಸುಹಾಸ್ ಹೆಚ್ , ಅಜಯ್ ಕುಮಾರ್ ಆರ್, ವಿವೇಕ ಅಂಗಡಿ ಎನ್ ಎಂ, ಲಕ್ಷ್ಮಿ ಎಂ, ಸಂಜನಾ ಎಂ ಎಂ, ಚಂದನಾ ಜಿ ವಿ, ಕರಿಬಸಮ್ಮ ಪಾನಿಯಪ್ಲ, ಶಿವಯೋಗಿ ಹೆಚ್ ಆರ್, ಈ ಎಲ್ಲಾ ವಿದ್ಯಾರ್ಥಿಗಳು ಕೂಡ ಎಂ.ಎಸ್.ಎಸ್. ಸ್ಕಾಲರ್ಶಿಪ್ನಲ್ಲಿ ಓದಿರುತ್ತಾರೆ.
ಮನೋಜ್ ಎಲ್ 593, ವಿನಯ್ ಕುಮಾರ್ ಆರ್ 590, ಕೃತಿಕ ಕದಂ 589, ಚೇತನ ಆರ್ 585, ಜೀವಿತ ಜೆ ಇಟಗಿ 585, ಸ್ನೇಹಲ್ ಕೆ ಕುಡ್ತೇಕರ್ 585, ಸುಹಾಸ್ ಹೆಚ್ 585, ಅಜಯ್ ಕುಮಾರ್ ಆರ್ 582, ವಿವೇಕ ಅಂಗಡಿ ಎನ್ ಎಂ 582, ಅಭಿನವ್ ಎಂ.ಎಸ್ 580, ಲಕ್ಷ್ಮಿ ಎಂ 580, ಸುಮಂತ ಪಿ 579, ರಕ್ಷಿತ ಕೆ 579, ಸಂಜನಾ ಎಂ ಎಂ 579, ಚಂದನಾ ಜಿ ವಿ 578, ಕರಿಬಸಮ್ಮ ಪಾನಿಯಪ್ಲ 578, ಶಿವಯೋಗಿ ಹೆಚ್ ಆರ್ 577, ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಡಿಸ್ಟಿಂಕ್ಷನ್ನಲ್ಲಿ 236 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 320, ದ್ವಿತೀಯ ದರ್ಜೆಯಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ 95.13% ಫಲಿತಾಂಶ ನೀಡಿದ್ದಾರೆ. ಕನ್ನಡ 13, ಸಂಸ್ಕೃತ 1, ಭೌತಶಾಸ್ತ್ರ 3, ರಸಾಯನ ಶಾಸ್ತ್ರ 2, ಗಣಿತ 8, ಜೀವಶಾಸ್ತ್ರ 18, ಕಂಪ್ಯೂಟರ್ ವಿಜ್ಞಾನದಲ್ಲಿ ಒಬ್ಬರು, 100 ಕ್ಕೆ 100 ಅಂಕಗಳಿಸಿದ್ದಾರೆ.
ಅತ್ಯುತ್ತಮ ಫಲಿತಾಂಶ ನೀಡಿದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದಿಸಿದ್ದಾರೆ.