ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಡ್ಯಾಂ (Bhadra Dam) ನೀರು ಬಂದ್, ದಾವಣಗೆರೆಯಲ್ಲಿ ಮುಂದುವರಿದ ಆಕ್ರೋಶದ ಜ್ವಾಲೆ: ಒಮ್ಮತಕ್ಕೆ ಬರಲಿಲ್ಲ ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಸಭೆ

On: September 19, 2023 4:03 PM
Follow Us:
BANGALORE DK SHIVUKUMAR MEETING
---Advertisement---

SUDDIKSHANA KANNADA NEWS/ DAVANAGERE/ DATE:19-09-2023

ದಾವಣಗೆರೆ: ಭದ್ರಾ ಡ್ಯಾಂ(Bhadra Dam)ನಿಂದ ಬಲದಂಡೆ ನಾಲೆಗೆ ನೀರು ಹರಿಸುವ ಸಂಬಂಧ ಬೆಂಗಳೂರಿನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಈಗಾಗಲೇ ನೀರು ಬಂದ್ ಮಾಡಲಾಗಿದ್ದು. ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಾರದೇ ಮುಂದೂಡಲಾಗಿದೆ.

BHADRA DAM
BHADRA DAM

ದೆಹಲಿಗೆ ಡಿ. ಕೆ. ಶಿವಕುಮಾರ್ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ತುರ್ತು ತೆರಳಬೇಕಿದ್ದ ಕಾರಣ ಸಭೆಯು ದೀರ್ಘವಾಗಿ ನಡೆಯಲಿಲ್ಲ. ಶಿವಮೊಗ್ಗ, ಚನ್ನಗಿರಿ, ದಾವಣಗೆರೆ ಸೇರಿದಂತೆ ಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನೂ ಓದಿ: 

ಭಾರತದಲ್ಲಿ ಏಳು ವರ್ಷಗಳ ಸುದೀರ್ಘ ಅವಧಿ ನಡೆಯುತ್ತದೆ MotoGP ’07 ರೇಸ್: 7 ವರ್ಷಗಳ ಒಪ್ಪಂದಕ್ಕೆ ಸಹಿ, ಕ್ರಿಕೆಟ್ ಗೆ ಠಕ್ಕರ್ ಕೊಡುತ್ತಾ ಬೈಕ್ ರೇಸ್…?

ಮಾತ್ರವಲ್ಲ, ಈ ಸಭೆಯ ಮೇಲೆ ಚಿತ್ತ ನೆಟ್ಟಿತ್ತು. ಈಗಾಗಲೇ ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಯಲ್ಲಿ ನೀರು ನಿಲ್ಲಿಸಲಾಗಿತ್ತು. ಹೆಚ್ಚಾಗಿ ನೆಚ್ಚಿಕೊಂಡಿರುವ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ರೊಚ್ಚಿಗೆದ್ದಿದ್ದಾರೆ. ಮಾತ್ರವಲ್ಲ, ಇಂದೂ ಪ್ರತಿಭಟನೆಯನ್ನೂ ನಡೆಸಿದರು.

ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಕೂಡಲೇ ಎಡದಂಡೆ ಹಾಗೂ ಬಲದಂಡೆ ನಾಲೆಯಲ್ಲಿ ನೀರು ಹರಿಸಬೇಕು. ಈಗಾಗಲೇ ಭತ್ತ ಬೆಳೆದಿರುವ ರೈತರು ಕಂಗಾಲಾಗಿದ್ದಾರೆ. ಸೋಮವಾರ ರಾತ್ರಿಯಿಂದ ನಾಲೆಯಲ್ಲಿ ನೀರು
ಬಂದ್ ಮಾಡಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಡಿ. ಕೆ. ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಜೊತೆ ಮಾತುಕತೆ ನಡೆಸಿದ್ದರು. ಜೊತೆಗೆ ನೀರಾವರಿ ಇಲಾಖೆಯ ಎಂ.ಡಿ. ಜೊತೆಯೂ ಚರ್ಚೆ ನಡೆಸಿ ನೀರು ಹರಿಸುವಂತೆ ಮನವಿ ಮಾಡಿದ್ದರು. ಮಲ್ಲಿಕಾರ್ಜುನ್ ಅವರು ಭಾನುವಾರ ಮನವಿ ಮಾಡಿದ ಕಾರಣ ನೀರು ಹರಿಸಲಾಗಿತ್ತು.

BHADRA DAM BRP
BHADRA DAM BRP

ಆದ್ರೆ, ಶಿವಮೊಗ್ಗ, ಭದ್ರಾವತಿ ಭಾಗದಲ್ಲಿ ರೈತರ ಹೋರಾಟ ಜೋರಾದ ಕಾರಣ ನೀರು ಸ್ಥಗಿತಗೊಳಿಸಲಾಗಿತ್ತು. ಮಳೆ ಬಾರದ ಕಾರಣ ಭದ್ರಾ ಡ್ಯಾಂ (Bhadra Dam) ನೀರು ದಿನೇ ದಿನೇ ಕಡಿಮೆಯಾಗುತ್ತಿದೆ. ಸಂಗ್ರಹವಾಗುತ್ತಿದ್ದ ನೀರು ಕುಸಿತ ಕಾಣುತ್ತಿದೆ. ಆನ್ ಅಂಡ್ ಆಫ್ ಬೇಡ, ನೀರು ಹರಿಸುವಂತೆ ದಾವಣಗೆರೆ ಭಾಗದ ರೈತರು ಹೋರಾಟ ಶುರು ಮಾಡಿದ್ದರು. ಆದ್ರೆ, ಮತ್ತೆ ನೀರು ನಿಲುಗಡೆ ಮಾಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ರೈತ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸಭೆ:

ಭದ್ರಾ ಜಲಾಶಯ(Bhadra Dam)ದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಇಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಈ ವೇಳೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಕೆ. ಎಸ್. ಬಸವಂತಪ್ಪ, ಶಿವಗಂಗಾ ಬಸವರಾಜ್, ಬಿ. ಪಿ. ಹರೀಶ್, ಶಾಂತನಗೌಡರು, ನೀರಾವರಿ ನಿಗಮ ವ್ವವಸ್ಥಾಪಕ ನಿರ್ದೇಶಕರು ಪಾಲ್ಗೊಂಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಶಸ್ತ್ರಚಿಕಿತ್ಸೆ

90 ವರ್ಷದ ತಾತನಿಗೆ ಹೊಸ ಜೀವ: ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

ದಾವಣಗೆರೆ

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

Leave a Comment