ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ: ಕೇಂದ್ರ ಸಚಿವ ನಡ್ಡಾಗೆ ಮನವಿ

On: July 31, 2025 2:54 PM
Follow Us:
ಪ್ರಭಾ ಮಲ್ಲಿಕಾರ್ಜುನ್
---Advertisement---

ದಾವಣಗೆರೆ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಗೆ ಅಗತ್ಯವಿರುವ‌ 16,568 ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಬೇಕೆಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್  ಅವರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರನ್ನು ನಿಯೋಗದೊಂದಿಗೆ ಭೇಟಿಯಾದ ಸಂಸದರು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಮುಂಗಾರು ಮಳೆ ಉತ್ತಮವಾಗಿದ್ದು ರೈತರಿಗೆ ಯೂರಿಯಾ ಅಗತ್ಯತೆಯ ಬಗ್ಗೆ ಮನವರಿಕೆ ಮಾಡಿದರು.

ಈ ಸುದ್ದಿಯನ್ನೂ ಓದಿ: ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ

ದಾವಣಗೆರೆ ಕ್ಷೇತ್ರದಲ್ಲಿ 2025 ರ ಮುಂಗಾರು ಹಂಗಾಮಿಗೆ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಒಟ್ಟು 54,162 ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದೆ. ಏಪ್ರಿಲ್ ನಿಂದ ಜುಲೈವರೆಗೆ ಸುಮಾರು 24,388 ಮೆಟ್ರಿಕ್ ಟನ್ ವರೆಗೂ ಯೂರಿಯಾ ಬಂದಿದೆ ಎಂದು ತಿಳಿಸಿದರು. ಪ್ರಸ್ತುತ ಕ್ಷೇತ್ರದಲ್ಲಿ 37,594 ಮೆಟ್ರಿಕ್ ಟನ್ ಅವಶ್ಯಕತೆ ಇದೆ ಎಂದು ಗಮನಸೆಳೆದರು.

ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಅವಧಿಗೂ ಮುನ್ನ ಆರಂಭವಾಗಿದ್ದು, ಮಳೆ ಪ್ರಮಾಣ ಶೇ. 41 ರಷ್ಟು ಹೆಚ್ಚಾಗಿದೆ ಆದ್ದರಿಂದ ಬಿತ್ತನೆ ಪ್ರಮಾಣ ಶೇ. 103 ರಷ್ಟು ಹೆಚ್ಚಾಗಿದ್ದು, ಯೂರಿಯಾ ಬೇಡಿಕೆಯು ಅಂದಾಜು ಅಗತ್ಯಕ್ಕಿಂತ ಹೆಚ್ಚಾಗಿದೆ. ಇದನ್ನು ಮನಗಂಡು ಅಗತ್ಯವಿರುವ 16,568 ಮೆಟ್ರಿಕ್‌ ಟನ್ ಯೂರಿಯಾ ರಸಗೊಬ್ಬರ ಪೂರೈಕೆ ಮಾಡಲು ಅಗತ್ಯ ಕ್ರಮವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸದರಾದ ಸಾಗರ್ ಖಂಡ್ರೆ, ಕುಮಾರ್ ನಾಯ್ಕ್, ತುಕಾರಾಂ ಅವರು ನಿಯೋಗದಲ್ಲಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment