ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗುಡ್ ನ್ಯೂಸ್: ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

On: September 19, 2025 4:43 PM
Follow Us:
ಅರ್ಜಿ
---Advertisement---

ದಾವಣಗೆರೆ: ಪ್ರಸಕ್ತ ಸಾಲಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಯೋಜನೆಯಡಿ ವಿಪ್ರಸ್ವ ಉದ್ಯಮ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ವಿಶ್ವದ ದೊಡ್ಡಣ್ಣನ ಮತ್ತೊಂದು ಕಳ್ಳಾಟ: ವಿಶ್ವಸಂಸ್ಥೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿ ನಿರ್ಬಂಧಿಸುವ ಪಾಕ್-ಚೀನಾ ಪ್ರಯತ್ನಕ್ಕೆ ಅಮೆರಿಕ ತಡೆ!

ವೃತ್ತಿಗಳಾದ ಹಸು, ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.

ಸಾಮಾನ್ಯ ಅರ್ಹತೆಗಳು:
  • ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು.
  • ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.
  • ಮಹಿಳೆಯರಿಗೆ 33%, ವಿಶೇಷಚೇತನರಿಗೆ ಶೇ 5% ಮೀಸಲಾತಿಯನ್ನು ನೀಡಲಾಗುವುದು.
  • ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು
ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್: ksbdb.karnataka.gov.in ಹಾಗೂ https://www.instagram.com/md.ksbdb2021/, ಮತ್ತು https://www.facebook.com/profile.php?id=61575786901624, https://x.com/Ksbdb2021 ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8762249230 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ.ಎಸ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment