ದಾವಣಗೆರೆ: ದಾವಣಗೆರೆ ಉತ್ತರ (DAVANAGERE NORTH) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್. ಮಲ್ಲಿಕಾರ್ಜುನ್ ಪರ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ (PRABHA MALLIKARJUN) ಹಾಗೂ ಸಮರ್ಥ್ ಶಾಮನೂರು ಬೆಳ್ಳಂಬೆಳಿಗ್ಗೆ ಮತಯಾಚನೆ ಮಾಡಿದರು.
ಎಂಸಿಸಿ ಬಿ ಬ್ಲಾಕ್ (MCC B BLOCK) ನಲ್ಲಿ ಮನೆ ಮನೆಗೆ ತೆರಳಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಮೂಲಕ ಪ್ರಚಂಡ ಜಯಭೇರಿ ಬಾರಿಸಲು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ನಗರ ಪಾಲಿಕೆ ವ್ಯಾಪ್ತಿಯ 38ನೇ ವಾರ್ಡ್ ಎಂಸಿಸಿ ಬಿ ಬ್ಲಾಕ್ ನ ಮಹಾನಗರ ಪಾಲಿಕೆ ಸದಸ್ಯ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್ ಪ್ರತಿನಿಧಿಸುವ ವಾರ್ಡ್ ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತಯಾಚನೆ ಮಾಡಿದರು.
ಎಂಸಿಸಿ ಬಿ ಬ್ಲಾಕ್ ನ 2,3,4 ಹಾಗೂ 5 ನೇ ಮುಖ್ಯ ರಸ್ತೆಗಳಲ್ಲಿ ಮನೆ (HOUSE) ಮನೆಗೆ ತೆರಳಿ ಪ್ರಚಾರ ನಡೆಸಿದರು. ಮಲ್ಲಿಕಾರ್ಜುನ್ ಅವರು ಶಾಸಕರಾಗಿದ್ದಾಗ, ಸಚಿವರಾಗಿದ್ದಾಗ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ, ಅವರಿಗೆ ಇನ್ನೊಮ್ಮೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿದರು.
ಡಾ. ಪ್ರಭಾ ಮಲ್ಲಿಕಾರ್ಜುನ್ ಮನೆ ಮನೆಗೆ ತೆರಳಿ ಮತಯಾಚನೆ
ಈ ಸಂದರ್ಭದಲ್ಲಿ ಸಮರ್ಥ್ ಶಾಮನೂರು, ಪಾಲಿಕೆ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.