SUDDIKSHANA KANNADA NEWS/ DAVANAGERE/ DATE:13-12-2023
ಬೆಂಗಳೂರು: ಈ ಬಾರಿ ಮಳೆ ಕೈಕೊಟ್ಟಿದೆ. ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಸರ್ಕಾರದ ಪರಿಹಾರ, ಬೆಳೆ ವಿಮೆಯತ್ತ ಚಿತ್ತ ನೆಟ್ಟಿದೆ. ಅನ್ನದಾತರು ಬೆಳೆ ಬಾರದೇ, ಮಳೆ ಕೈಕೊಟ್ಟಿರುವ ಕಾರಣದಿಂದ ತತ್ತರಿಸಿ ಹೋಗಿದ್ದಾರೆ. ಹಾಕಿದ್ದ ಬಂಡವಾಳವೂ ಬಾರದೇ ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ. ಬೆಳ ವಿಮೆಗೆ ಈಗಾಗಲೇ ರೈತರು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಹಣ ಯಾವಾಗ ಬರುತ್ತದೆ ಎಂದು ಕಾಯುತ್ತಲೇ ಇದ್ದಾರೆ. ಅಂಥವರಿಗೆ ಈ ಸುದ್ದಿ ಖುಷಿ ಕೊಡಲಿದೆ.
ಈಗಾಗಲೇ 2020ರ ಮುಂಗಾರು ಬೆಳೆ ವಿಮೆಗೆ ಅನ್ನದಾತರು ಅರ್ಜಿ ಹಾಕಿದ್ದಾರೆ. ರಾಜ್ಯ ಸರ್ಕಾರವು ಈಗಾಗಲೇ 200 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆದ್ರೆ, ಯಾವುದೇ ಬೆಳೆ ವಿಮೆ ಜಮಾ ಆಗಿಲ್ಲ. ಬೆಳೆ ವಿಮೆಯ ಬಗ್ಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆಯಾ ಅಥವಾ ಇಲ್ಲವೋ ಎಂದು ಖಚಿತ ಪಡಿಸಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
https://samrakshane.karnataka.gov.in/
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಅತಿ ಸುಲಭವಾಗಿ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಸ್ಟೇಟಸ್ ಅನ್ನು ಮೂರು ವಿಧದಲ್ಲಿ ಚೆಕ್ ಮಾಡಿಕೊಳ್ಳಬಹುದು ಒಂದು ನಿಮ್ಮ ಮೊಬೈಲ್ ನಂಬರ್ ಬಳಸಿಕೊಂಡು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.
ಮತ್ತೊಂದು ರೈತರ ಆಧಾರ್ ಕಾರ್ಡ್ ನಂಬರ್ ಬಳಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಮೂರನೇಯದ್ದು ವಿಧವೆಂದರೆ ಅದೇ ನೀವು ಅರ್ಜಿ ಸಲ್ಲಿಸಿರುವಂತಹ ಅಪ್ಲಿಕೇಶನ್ ನಂಬರ್ ಅಂದರೆ acknowledgment ನಂಬರ್ ಬಳಸಿಕೊಂಡು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದರಲ್ಲಿ ನಿಮಗೆ ಯಾವುದು ಅನುಕೂಲವಾಗುತ್ತದೆಯೋ ಅದನ್ನು ಬಳಸಿಕೊಂಡು ನೀವು ನಿಮ್ಮ ಸ್ಟೇಟಸ್ ಕೂಡಲೇ ಚೆಕ್ ಮಾಡಿಕೊಳ್ಳಿ
ಸಚಿವರು ಸದನದಲ್ಲಿ ಹೇಳಿದ್ದೇನು…?
ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬರಗಾಲದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎರಡು ಸಾವಿರ ರೂ.ವರೆಗಿನ ಬರ ಪರಿಹಾರ ನೀಡುವ ಪ್ರಕ್ರಿಯೆಗೆ ಒಂದು ವಾರದಲ್ಲಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
85.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಇತ್ತು. 74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಯಿತು. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ಬೆಳೆ ನಷ್ಟವಾಯಿತು. ಮೂರು ಹಂತಗಳಲ್ಲಿ ಕ್ರಮವಾಗಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು ಎಂದು ಕೃಷ್ಣ ಬೈರೇಗೌಡ ಹೇಳಿದರು.
ರಾಜ್ಯದಲ್ಲಿನ ಬರಗಾಲದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಉತ್ತರ ನೀಡಿದ ಅವರು, ಪ್ರಸಕ್ತ ಸಾಲಿನ ಜೂನ್ನಲ್ಲಿ ವಾಡಿಕೆಗಿಂತ ಶೇ.57ರಷ್ಟು (ಕಡಿಮೆ), ಜುಲೈನಲ್ಲಿ ಶೇ.29ರಷ್ಟು(ಹೆಚ್ಚು), ಆಗಸ್ಟ್ ನಲ್ಲಿ ಶೇ.73ರಷ್ಟು(ಕಡಿಮೆ), ಸೆಪ್ಟಂಬರ್ ನಲ್ಲಿ ಶೇ.10ರಷ್ಟು ಹಾಗೂ ಅಕ್ಟೋಬರ್ ನಲ್ಲಿ ಶೇ.65ರಷ್ಟು ಕಡಿಮೆ ಮಳೆಯಾಯಿತು ಎಂದರು.
ಅದೇ ರೀತಿ ಕೇಂದ್ರ ಸರಕಾರಕ್ಕೂ ಸೆಪ್ಟಂಬರ್, ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಮೆಮೊರಂಡನ್ ಸಲ್ಲಿಸಿ ಎನ್ಡಿಆರ್ ಎಫ್ ಅಡಿಯಲ್ಲಿ 18,171 ಕೋಟಿ ರೂ.ಗಳ ನೆರವು ನೀಡುವಂತೆ ಕೋರಲಾಗಿದೆ. ಕೇಂದ್ರ ಸರಕಾರದ ಅಧಿಕಾರಿಗಳ ತಂಡವು ರಾಜ್ಯದ 13 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿ, ರಾಜ್ಯ ಸರಕಾರ ನೀಡಿರುವ ವರದಿಯು ವಸ್ತುಸ್ಥಿತಿಯಿಂದ ಕೂಡಿದೆ ಎಂದು ಒಪ್ಪಿದೆ ಎಂದು ಅವರು ತಿಳಿಸಿದರು.