ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಿಎಂ-ಕುಸುಮ್ ಯೋಜನೆಯಡಿ ಸೋಲಾರ್ ಘಟಕ ನಿರ್ಮಾಣಕ್ಕೆ ಭೂಮಿ ವಶ: ಆತ್ಮಹತ್ಯೆಗೆ ಯತ್ನಿಸಿದ ರೈತ!

On: January 18, 2025 8:43 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-01-2025

ದಾವಣಗೆರೆ: ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಗೋಮಾಳದಲ್ಲಿ 49 ಎಕರೆ ಪ್ರದೇಶಕ್ಕೆ ತಂತಿ ಬೇಲಿ ಅಳವಡಿಸಿರುವುದನ್ನು ವಿರೋಧಿಸಿ ರೈತರೊಬ್ಬರು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಸಣ್ಣಚಿಕ್ಕಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತ ಎಂದು ಗುರುತಿಸಲಾಗಿದೆ. ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಸರಬರಾಜು ಮಾಡಲು ಪಿಎಂ- ಕುಸುಮ್ ಯೋಜನೆಯಡಿ ಘಟಕ ನಿರ್ಮಾಣ ಮಾಡಲು ಬೇಲಿ ಹಾಕಲಾಗಿದೆ. ಗೋಮಾಳದ ಸರ್ವೆ ನಂಬರ್ 103ರಲ್ಲಿ ಸಣ್ಣಚಿಕ್ಕಪ್ಪ 2 ಎಕರೆ ಭೂಮಿ ಹೊಂದಿದ್ದರು. ಸೋಲಾರ್ ವಿದ್ಯುತ್ ಉತ್ಪಾದನೆಗೆ ಭೂಮಿಯನ್ನು ವಶಪಡಿಸಿಕೊಂಡಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಪೊಲೀಸ್ ಹಾಗೂ ಬೆಸ್ಕಾಂ ಸಿಬ್ಬಂದಿ ಕೂಡಲೇ ಆಂಬುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬೆಸ್ಕಾಂ ಅಧಿಕಾರಿಗಳ ದೂರಿನ ಅನ್ವಯ ರೈತ
ಸಣ್ಣಚಿಕ್ಕಪ್ಪ ವಿರುದ್ಧ ಆತ್ಮಹತ್ಯೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೊನ್ನಾಳಿ ಸಿಪಿಐ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಣ್ಣಚಿಕ್ಕಪ್ಪನ ಪತ್ನಿ ಸಾಕಮ್ಮ ಅವರೂ ಸಹ ಸೋಲಾರ್ ಕಂಪೆನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment