Home ದಾವಣಗೆರೆ ₹2,186 ಕೋಟಿ ಅನುದಾನ ನೀಡದ ಕೇಂದ್ರ ಸರ್ಕಾರ ಗ್ರಾಮೀಣ ಕರ್ನಾಟಕಕ್ಕೆ ಮಹಾದ್ರೋಹ ಎಸಗಿದೆ: ಪ್ರಿಯಾಂಕ್ ಖರ್ಗೆ ಸಿಡಿಮಿಡಿ!
ದಾವಣಗೆರೆನವದೆಹಲಿಬೆಂಗಳೂರು

₹2,186 ಕೋಟಿ ಅನುದಾನ ನೀಡದ ಕೇಂದ್ರ ಸರ್ಕಾರ ಗ್ರಾಮೀಣ ಕರ್ನಾಟಕಕ್ಕೆ ಮಹಾದ್ರೋಹ ಎಸಗಿದೆ: ಪ್ರಿಯಾಂಕ್ ಖರ್ಗೆ ಸಿಡಿಮಿಡಿ!

Share
Share

SUDDIKSHANA KANNADA NEWS/DAVANAGERE/DATE:10_12_2025

ಬೆಳಗಾವಿ: ಕೇಂದ್ರ ಸರ್ಕಾರದ ಅನ್ಯಾಯಗಳ ಸರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 15ನೇ ಹಣಕಾಸು ಆಯೋಗದ ಅನುದಾನದ ಬಾಕಿಯೂ ಪ್ರಮುಖವಾದುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಗಳ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿರುವ ಈ ಅನ್ಯಾಯದ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದರೂ ಕರ್ನಾಟಕದೆಡೆಗಿನ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ದೂರಿದ್ದಾರೆ.

2026ರ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದರೂ ₹2,186 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವುದು ಗ್ರಾಮೀಣ ಕರ್ನಾಟಕಕ್ಕೆ ಎಸಗುತ್ತಿರುವ ಮಹಾದ್ರೋಹವೇ ಸರಿ ಎಂದಿದ್ದಾರೆ.

ತಕ್ಷಣವೇ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳು, ವಿಕಲಚೇತನರ ಕಲ್ಯಾಣ, ರಸ್ತೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗುವ ಈ ಅನುದಾನವನ್ನು ಬೇರೆಲ್ಲ ರಾಜ್ಯಗಳಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಮಲತಾಯಿ ಧೋರಣೆ ತೋರುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಬಿಜೆಪಿ ಕರ್ನಾಟಕ ನಾಯಕರಿಗೆ ಕರ್ನಾಟಕದ ಬಗ್ಗೆ, ಕನ್ನಡಿಗರ ಬಗ್ಗೆ ಕಾಳಜಿ ಇದ್ದರೆ ಈ ಅನ್ಯಾಯದ ಕುರಿತು ನಮ್ಮೊಂದಿಗೆ ದನಿಗೂಡಿಸಲಿ ಎಂದು ಪ್ರಿಯಾಂಕ್ ಖರ್ಗೆ ಸಲಹೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *