ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ವಿವಿ ನೆಟ್‌ಬಾಲ್ ಪಂದ್ಯಾವಳಿ: ಜಿಎಂಎಸ್ ಅಕಾಡೆಮಿ ವಿದ್ಯಾರ್ಥಿಗಳ ಅಮೋಘ ಕ್ರೀಡಾ ಸಾಧನೆ

On: December 24, 2024 3:30 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:24-12-2024

ದಾವಣಗೆರೆಯ ಜಿಎಂಎಸ್ ಅಕಾಡೆಮಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ತಂಡವು ದಾವಣಗೆರೆ ವಿಶ್ವವಿದ್ಯಾನಿಲಯ ನೆಟ್‌ಬಾಲ್ ಪಂದ್ಯಾವಳಿ 2024 ರಲ್ಲಿ ಭಾಗವಹಿಸಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇದೇ ಡಿಸೇಂಬರ್ 21 ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯಲ್ಲಿ ರಾಕೇಶ್ ವೈ ಎಸ್(3ನೇ ಬಿಎಸ್ಸಿ), ಮಯೂರ್ ಎಸ್ ಕೆ (3ನೇ ಬಿಕಾಂ), ಶಶಿಧರ್ (3ನೇ BCA), ಚರಣ್ ಟಿ ಎಂ(3ನೇ ಬಿಎಸ್ಸಿ), ಮೋಹನ್ ಕೆಎಂ(2ನೇ ಬಿಕಾಂ), ಅಜಯ್ ಕುಮಾರ್ ಡಿ ಎನ್(3ನೇ ಬಿಸಿಎ), ಮಧು ಎಂ(2ನೇ ಬಿಕಾಂ), ಧನುಷ್ ಗೌಡ ಡಿ(2ನೇ ಬಿಸಿಎ), ಸಾಹಿಲ್ ಎ ಸಿ(2ನೇ ಬಿಎಸ್ಸಿ) ಜಿಎಂಎಸ್ ಅಕಾಡೆಮಿ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನದ ಬಹುಮಾನವನ್ನು ಪಡೆದುಕೊಂಡಿದೆ.

ಜಿಎಂಎಸ್ ಅಕಾಡೆಮಿ ಬಾಲಕಿಯರ ತಂಡದ ತೇಜಸ್ವಿನಿ ಎ(3ನೇ ಬಿಕಾಂ), ತನ್ವಿ ಎನ್ ಗುಪ್ತಾ(3ನೇ ಬಿಕಾಂ), ದಿಯಾಶ್ರೀ ಎಸ್ ಎಸ್(3ನೇ ಬಿಕಾಂ), ತೇಜಸ್ವಿನಿ ಎನ್(3ನೇ BCA), ಕ್ಷೇಮ ಕೋನ B(3ನೇ BCA), ಧನುಶ್ರೀ (3ನೇ ಬಿಕಾಂ), ರಕ್ಷಿತಾ ಟಿ ಪಿ(2ನೇ ಬಿಸಿಎ), ಕರ್ಣಶ್ರೀ ಎಸ್ ಎಸ್(3ನೇ ಬಿಕಾಂ), ಭೂಮಿಕಾ ಕೆಬಿ(3ನೇ ಬಿಸಿಎ) ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯುತ್ತಮ ಪ್ರದರ್ಶನಕ್ಕಾಗಿ ಈ ಎರಡೂ ತಂಡಗಳಿಗೆ ಜಿಎಂ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗ, ಕ್ರೀಡಾ ವಿಭಾಗ ಅಭಿನಂದಿಸಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ನಮಗೆ ಹೆಮ್ಮೆ ತಂದಿದೆ ಎಂದು ಹರ್ಷ ವ್ಯಕ್ತಪಡಿಸಲಾಗಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment