ದಾವಣಗೆರೆ: ನಗರದ ಅಭಿನವ ರೇಣುಕಾಮಂದಿರದಲ್ಲಿ ಪಂಚ ಪೀಠಾಧ್ಯಕ್ಷರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಬರಲಿರುವ ಜಾತಿಗಣತಿಯಲ್ಲಿ ಎಲ್ಲಾ ಒಳಪಂಗಡಗಳು ವೀರಶೈವ ಲಿಂಗಾಯತ ಎಂದೇ ಬರೆಸಬೇಕು. ವೀರಶೈವ ಲಿಂಗಾಯತ ಸಮಗ್ರತೆ ಮತ್ತು ಒಗ್ಗಟ್ಟು ಪ್ರತಿಪಾದಿಸಬೇಕು ಎಂಬುದೂ ಸೇರಿದಂತೆ 12 ನಿರ್ಣಯಗಳನ್ನು ಅಂಗೀಕರಿಸಲಾಗಿದೆ.
READ ALSO THIS STORY: ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ: ಎಲ್ಲಾ ಪಕ್ಷಗಳ ಧುರೀಣರು ಆತಂಕ ವ್ಯಕ್ತಪಡಿಸಿದ್ಯಾಕೆ?
ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು 12 ನಿರ್ಣಯಗಳನ್ನು ಘೋಷಿಸಿದರು.
12 ನಿರ್ಣಯಗಳು ಯಾವುವು?
1. ಬರಲಿರುವ ಜಾತಿಗಣತಿಯಲ್ಲಿ ಎಲ್ಲಾ ಒಳಪಂಗಡಗಳು ವೀರಶೈವ ಲಿಂಗಾಯತ ಎಂದೇ ಬರೆಸಬೇಕು. ವೀರಶೈವ ಲಿಂಗಾಯತ ಸಮಗ್ರತೆ ಮತ್ತು ಒಗ್ಗಟ್ಟು ಪ್ರತಿಪಾದಿಸಬೇಕು.
2. ಸನಾತನ ಹಿಂದೂ ವೀರಶೈವ ಧರ್ಮದ ಲಿಂಗಾಯತ ಅನುಯಾಯಿಗಳು ಉದ್ಯೋಗದಿಂದಲೇ ಉಪಜಾತಿ ನಿರ್ಮಾಣ ಆಗಿದ್ದು, ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಧರ್ಮವು
ಹಂಚಿ ಹೋಗಬಾರದು. ಉಪಜಾತಿ ಯಾವುದೇ ಇದ್ದರೂ ವೀರಶೈವ ಲಿಂಗಾಯತ ಒಗ್ಗಟ್ಟು ಕಾಪಾಡಿಕೊಂಡು ಹೋಗಬೇಕು.3. ಜನಗಣತಿ ಮಾಡುವ ವೇಳೆ ಮತದ ಕಾಲಂ ಇರಬೇಕು ಎಂಬ ಆಗ್ರಹವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ. ಈ ವಿಷಯವಾಗಿ
ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಸಮಾಜದ ಮುಖಂಡರು, ವೀರಶೈವ ಲಿಂಗಾಯತ ಸಮಾಜದ ಮಠಾಧಿಪತಿಗಳು, ಎಲ್ಲಾ ಪಕ್ಷಗಳ ಸಂಸದರ ನಿಯೋಗ ನವದೆಹಲಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು.4,.ವೀರಶೈವ ಲಿಂಗಾಯತ ಧರ್ಮದ ಎಲ್ಲಾ ಒಳಪಂಗಡಗಳಿಗೆ ಕೇಂದ್ರ ಸರ್ಕಾರದ ಒಬಿಸಿ ಕೊಡಿಸಲು ಎಲ್ಲಾ ಉಪಪಂಗಡಗಳ ಒಗ್ಗಟ್ಟಿನಿಂದ ರಚನಾತ್ಮಾಕ ಕಾರ್ಯಕ್ರಮ ಆಯೋಜಿಸಬೇಕು.
5. ವೀರಶೈವ ಲಿಂಗಾಯತ ಒಳಪಂಗಡಗಳಿಗೆ ನೀಡಲಾಗುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೀಸಲಾತಿ ಮುಂದುವರಿಕೆ ಆಗಬೇಕು.
6. ವೀರಶೈವ ಲಿಂಗಾಯತ ಮಹಾಸಭಾ ಎಲ್ಲಾ ಜಿಲ್ಲಾ, ತಾಲೂಕು, ಗ್ರಾಮೀಣ ಭಾಗದ ಸಂಘಟನೆಗಳು ಯಾವುದೇ ಕಾರ್ಯಕ್ರಮ, ರ್ಯಾಲಿ ಸೇರಿದಂತೆ ಸಮಾರಂಭ ನಡೆಸಿದರೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಫೋಟೋ ಹಾಕಬೇಕು. ಕೆಲವು ಕಡೆ ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪಿಸಿದ ಲಿಂಗೈಕ್ಯ ಹಾನಗಲ್ ಕುಮಾರಸ್ವಾಮಿ, ಬಸವಣ್ಣವರ ಥಮ್ಲಂ ಬಲಭಾಗದಲ್ಲಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಹಾಕದೇ ಕೆಲವು ಸಂಘಟನೆಗಳು ಪತ್ರಿಕೆಗಳಲ್ಲಿ ಪ್ರಕಟಿಸಿದ್ದು ಗಮನಕ್ಕೆ ಬಂದಿದೆ. ಹಾಗೆ ಮಾಡಬಾರದು. ಈ ಮೂಲಕ ಮಹಾಸಭಾಗೆ ತಿಳುವಳಿಕೆ ಕೊಡುತ್ತೇವೆ. ಪಂಚಪೀಠಾಧ್ಯಕ್ಷರ ಐದು ಫೋಟೋ ಹಾಕಲು ಕಷ್ಟವಾಗುತ್ತದೆ. ಐದೂ ಫೋಟೋ ಹಾಕಲು ಸಾಧ್ಯ ಆಗದಿದ್ರೆ ರೇಣುಕಾಚಾರ್ಯರ ಒಂದು ಫೋಟೋವಾದರೂ ಇರಬೇಕು ಎಂಬುದು ಪಂಚಪೀಠಾಧ್ಯಕ್ಷರ ಬಯಕೆ. ಇದಕ್ಕೆ ಎಲ್ಲರ ಸಹಮತ ಇದೆ.
7. ವೀರಶೈವ ಲಿಂಗಾಯತ ಸಮುದಾಯದ ತತ್ವ, ಸಿದ್ಧಾಂತ ಮನವರಿಕೆ ಮಾಡಿಕೊಡಬೇಕು.
8. ಗುರು ಪರಂಪರೆ, ಪ್ರಾಚೀನ ಪರಂಪರೆ ಆಚರಣೆ ಸೇರಿದಂತೆ ಹಿಂದಿನಂತೆ ಎಲ್ಲವೂ ನಡೆಯುವಂತಾಗಬೇಕು ಯುವಜನಾಂಗದವರಿಗೆ ವೀರಶೈವ ಲಿಂಗಾಯತ ಧರ್ಮದ ಆಚರಣೆ, ಇತಿಹಾಸ, ಧಾರ್ಮಿಕ ಪರಂಪರೆ ತಿಳಿಸಿಕೊಡುವ ಕೆಲಸ ಆಗಬೇಕು.
9. ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಒಳಪಂಗಡಗಳ ವಿಕಲಚೇತನರು, ಶೋಷಿತರ ಹಿತರಕ್ಷಣೆ, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು.
10. ಪಂಚಪೀಠಗಳು ಮತ್ತು ಶಾಖಾ ಮಠಗಳ ನಡುವೆ ಉತ್ತಮ ಬಾಂಧವ್ಯ, ವಾತಾವರಣ ನಿರ್ಮಾಣಗೊಳ್ಳಬೇಕು. ಆಯಾ ಪೀಠಗಳ ಪೀಠಾಧ್ಯಕ್ಷರು ಶಾಖಾ ಮಠಗಳ ಸಮಸ್ಯೆ ಪರಿಹರಿಸಲು ಮಾರ್ಗದರ್ಶನ ನೀಡಿ ಬಲಪಡಿಸಬೇಕು. ಶಾಖಾ ಮಠದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು.
11. ಪ್ರತಿವರ್ಷವೂ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗಸಭೆ ನಡೆಸಿ ವೀರಶೈವ ಲಿಂಗಾಯತ ಪರಂಪರೆ ಆದರ್ಶ ಪಾಲನೆ ಮಾಡಲಾಗುವುದು.
12. ಉತ್ತರ ಭಾರತದ ದೆಹಲಿ, ರಾಜಸ್ತಾನ, ಜಮ್ಮುಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನಾದಿ ಕಾಲದಿಂದಲೂ ವೀರಶೈವ ಲಿಂಗಾಯತ ಸಮುದಾಯದವರು ವಾಸವಿದ್ದು, ಅವರಿಗೂ ಸರ್ಕಾರಿ ಸೌಲಭ್ಯಗಳು, ಯೋಜನೆಗಳನ್ನು ರೂಪಿಸಬೇಕು.
ಈ ಹನ್ನೆರಡು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಪಂಚಪೀಠಾಧ್ಯಕ್ಷರು ಸಹಮತ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಬಾಳೆಹೊನ್ನೂರು ಶ್ರೀಗಳು ಹೇಳಿದರು.
ಉಜ್ಜಯನಿ ಸದ್ಧರ್ಮ ಪೀಠದ ಶ್ರೀ ಜಗದ್ಗುರುಗಳಾದ ಪರಮಪೂಜ್ಯ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಕೇದಾರ ಪೀಠದ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಶ್ರೀಗಳು, ಶ್ರೀ ಕಾಶಿ ಜ್ಞಾನ ಪೀಠ ಪೂಜ್ಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದ ಶ್ರೀಗಳು, ಶ್ರೀಶೈಲ ಮಹಾಸಂಸ್ಥಾನ ಪೀಠದ ಪರಮ ಪೂಜ್ಯರಾದ ಜಗದ್ಗುರು ಡಾ. ಶ್ರೀ ಚನ್ನಸಿದ್ಧರಾಮ ಶಿವಾಚಾರ್ಯ ಶ್ರೀಗಳು, ಪರಮಪೂಜ್ಯ ರೇಣುಕ ಶಿವಾಚಾರ್ಯ ಶ್ರೀಗಳು ಹಾಜರಿದ್ದರು.