• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

Editor by Editor
August 21, 2024
in ಬೆಂಗಳೂರು
0
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

SUDDIKSHANA KANNADA NEWS/ DAVANAGERE/ DATE:21-08-2024

ಬೆಂಗಳೂರು: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬಿಜಾಪುರ ಜಿಲ್ಲೆಯ  ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ. ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ ಪ್ರಧಾನಮಂತ್ರಿ ಅವರನ್ನು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ. ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ. ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು ಎಂದು ತಿಳಿಸಿದರು.

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.
ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.

ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ. ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

Next Post
DINA BHAVISHYA: ಈ ರಾಶಿಯ ಉದ್ಯೋಗಿಗಳಿಗೆ ಸಂಘ ಸಂಸ್ಥೆ ಸಾರ್ವಜನಿಕರಿಂದ ತೊಂದರೆ, ನಿಂತಿರುವ ಮದುವೆ ಮರು ಪ್ರಾರಂಭ

DINA BHAVISHYA: ಈ ರಾಶಿಯವರಿಗೆ ಅಂತೂ ಇಂತು ಮದುವೆ ಫಿಕ್ಸ್ ಆಯ್ತು, ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ  ಹುಸಿಯಾಗುವುದಿಲ್ಲ.

Leave a Reply Cancel reply

Your email address will not be published. Required fields are marked *

Recent Posts

  • ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ
  • ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಸಮರ್ಥನೆ: SC-ST,OBC ವರ್ಗಗಳಿಗೆ ತೊಂದರೆಯಾಗಲ್ವಂತೆ ಸಿಎಂ ಸಿದ್ದರಾಮಯ್ಯರ ಪ್ರಕಾರ!
  • ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?
  • ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ್
  • ಸುಪ್ರೀಂ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ: 3 ತಿಂಗಳಲ್ಲಿ ಸರ್ವೇ ಪೂರ್ಣಗೊಳಿಸಲು ಸೂಚನೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In