ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

On: March 13, 2024 10:46 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-03-2024

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು
ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್ ರಸ್ತೆ ಶಿವಮೊಗ್ಗ ಇಲ್ಲಿ
ಪಡೆದುಕೊಳ್ಳಬೇಕು. ಅದೇ ದಿನ ಈ ಎಲ್ಲ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30ರ ವರೆಗೆ ನಡೆಸಲಾಗುವುದು.

ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು ಮತ್ತು ಕೆ.ಎಂ.ಸಿಯ ನೋಂದಣೆಯನ್ನು ಹೊಂದಿರತಕ್ಕದ್ದು. ಸರ್ಕಾರದ ನಿಯಮಾವಳಿ ಎನ್.ಹೆಚ್.ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು. ಹುದ್ದೆಗಳಿಗೆ ನಮೂದಿಸಿರುವ ವೇತನದಲ್ಲಿ ಭವಿಷ್ಯ ನಿಧಿ/ವೃತ್ತಿ ತೆರಿಗೆ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಪ್ರಕಾರ ತೆರಿಗೆಯನ್ನು ಇತ್ಯಾದಿ ಕಟಾವಣೆ ಮಾಡಲಾಗುವುದು. ಎನ್.ಹೆಚ್.ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೆರಿಟ್ ಕಂ ರೋಸ್ಟ್‍ರ್ ಆಧಾರದ ಮೇಲೆ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ,ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಸ್ವವಿವರದೊಂದಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08182-200337 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment