SUDDIKSHANA KANNADA NEWS/ DAVANAGERE/ DATE:08-02-2025
ದಾವಣಗೆರೆ: ಕೇಂದ್ರ ಪುರಸ್ಕೃತ ಅಮೃತ್-2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದಡಿ ನಗರಸಭೆ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ನೊಂದಾಯಿತ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡೇ-ನಲ್ಮ್ ಯೋಜನೆಯಡಿ ನೊಂದಾಯಿಸಿಕೊಂಡ ಆಸಕ್ತ ಸ್ವ-ಸಹಾಯ ಗುಂಪುಗಳ ಸದಸ್ಯರುಗಳು ತಮ್ಮ ಆಸಕ್ತಿಯನ್ನು ಮುಚ್ಚಿದ ಲಕೋಟೆಯಲ್ಲಿ ನಗರಸಭೆ ಹರಿಹರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೆೀರಿಯ ಡೇ-ನಲ್ಮ್ ಸಂಪರ್ಕಿಸಲು ಪೌರಾಯುಕ್ತರು ತಿಳಿಸಿದ್ದಾರೆ.