Site icon Kannada News-suddikshana

ಸೇನಾ ವಾಹನ ಅಪಘಾತ ಪ್ರಕರಣ: ರಾಜ್ಯದ ಮೂವರು ಯೋಧರು ಸಾವು

ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಭೀಕರ ಅಪಘಾತದಲ್ಲಿ ಕರ್ನಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಪೂಂಛ್ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಒಟ್ಟು ಐವರು ಯೋಧರು ಸಾವನ್ನಪ್ಪಿದ್ದಾರೆ. ಅವರಲ್ಲಿ ಮೂವರು ಯೋಧರು ಕರ್ನಾಟಕದವರಾಗಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಬೆಳಗಾವಿಯ ಸಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ್ (45), ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಕೋಟೇಶ್ವರದ ಬಿಜಾಡಿಯ ಅನೂಪ್ (33) ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ

Exit mobile version