ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಚ್ಚು, ಅಡಿಕೆ ಸುಲಿಯುವ ಕತ್ತಿ ಹಿಡಿದು ಕಳ್ಳತನ: ಮೂವರು ಆರೋಪಿಗಳ ಸೆರೆ, ರೂ. 12,28,000 ಮೌಲ್ಯದ ಸ್ವತ್ತು ವಶ

On: October 11, 2025 1:51 PM
Follow Us:
ಕಳ್ಳತನ
---Advertisement---

ದಾವಣಗೆರೆ: ಸುಲಿಗೆ ಮತ್ತು ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 12,28,000 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

READ ALSO THIS STORY: 150 ಕೋಟಿ ರೂ. ವಂಚನೆ, ಖಾತೆಯಲ್ಲಿ 18 ಕೋಟಿ ರೂ. ಹಣ ಹೊಂದಿದ್ದ ವಂಚಕರು: ಸೆರೆ ಸಿಕ್ಕ ಆರೋಪಿ ಹಿಸ್ಟರಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಶಿವಮೂರ್ತಿ ಅಲಿಯಾಸ್ ಮುರುಡ, ರಮೇಶ್ ಅಲಿಯಾಸ್ ಗಿಡ್ಡ ರಾಮ ಬಂಧಿತ ಆರೋಪಿಗಳು. ಚಿರಡೋಣಿ ಗ್ರಾಮದ ಸತ್ಯನಾರಾಯಣ ಅವರ ಮನೆಯ ಸುಲಿಗೆ ಪ್ರಕರಣದಲ್ಲಿ ಹಾಗೂ ಆರೋಪಿತರೊಂದಿಗೆ ಶಾಮಿಲಾಗಿದ್ದ ಪ್ರಕರಣದ ಮೂರನೇ ಆರೋಪಿ ರುದ್ರೇಶ ಎಂಬಾತನೂ ಸಿಕ್ಕಿಬಿದ್ದಿದ್ದಾನೆ. ಚಿರಡೋಣಿ ಗ್ರಾಮದ ಹಂಸತಾರಕಂ ಮನೆಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಆರೋಪಿತರು ಕೃತ್ಯಕ್ಕೆ ಬಳಸಿದ್ಗ ಮಚ್ಚು, ಸುಲಿಗೆ ಮತ್ತು ಮನೆಕಳ್ಳತನ ಮಾಡಿದ್ದ ಒಟ್ಟು 12,28,000 ರೂಪಾಯಿ ಬೆಲೆ ಬಾಳುವ 2 ಮಾಂಗಲ್ಯ ಸರಗಳು, ಒಂದು ಜೊತೆ ಬೆಂಡೋಲೆ, ಬೆಳ್ಳಿಯ ಸಾಮಾನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಏಪ್ರಿಲ್ 27ರಂದು ಹಂಸತಾರಕಂ ಕುಟುಂಬ ಸಮೇತ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದಾಗ ಚಿರಡೋಣಿ ಕ್ಯಾಂಪ್ ನಲ್ಲಿನ ವಾಸದ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬೀಗವನ್ನು ಹೊಡೆದು ಮನೆಯ ಬೀರುವನ್ನು ಓಪನ್ ಮಾಡಿ ಅದರಲ್ಲಿದ್ದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಆಗಸ್ಟ್ 14ರಂದು ರಾತ್ರಿ 7.40ರ ಸಮಯದಲ್ಲಿ ಸುಮಲತಾ ಅವರು ಚಿರಡೋಣಿ ಕ್ಯಾಂಪ್ ನ ತಮ್ಮ ಮನೆಯಲ್ಲಿದ್ದಾಗ ಯಾರೋ ಇಬ್ಬರು ಅಪರಿಚಿತರು ಕಪ್ಪು ಬಣ್ಣದ ಬಟ್ಟೆ ಮಾಸ್ಕ್ ಹಾಕಿಕೊಂಡು ಕೈಯಲ್ಲಿ ಅಡಿಕೆ ಸುಲಿಯುವ ಕತ್ತಿ ಮತ್ತು ಚಾಕುಗಳನ್ನು ಹಿಡಿದುಕೊಂಡು ಮನೆಯ ಹಿಂಬಾಗಿಲಿನ ಮೂಲಕ ಪ್ರವೇಶಿಸಿದ್ದರು. ಸುಮಲತಾ ಹಾಗೂ ಅತ್ತೆ ವೀರಯಮ್ಮ ಅವರ ಮೇಲೆ ಹಲ್ಲೆ ನಡೆಸಿ, ಕೊರಳಿನಲ್ಲಿದ್ದ 2 ಬಂಗಾರದ ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

ಸಂತೇಬೆನ್ನೂರು ಸಿಪಿಐ ಲಿಂಗನಗೌಡ ನೆಗಳೂರು ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ಮಲಾಲಾ ಯೂಸುಫ್‌ಜಾಯ್

“ಬಸ್, ಮನುಷ್ಯ, ಬಂದೂಕು, ರಕ್ತ”: ತಾಲಿಬಾನ್ ದಾಳಿ ಬಗ್ಗೆ ಮಲಾಲಾ ಯೂಸಫ್ ಜಾಯ್ ನೆನಪಿಸಿಕೊಂಡಿದ್ಯಾಕೆ?

Leave a Comment