SUDDIKSHANA KANNADA NEWS/ DAVANAGERE/ DATE:23-07-2024
ದಾವಣಗೆರೆ: ದೇವಸ್ಥಾನದ ದೇವರ ಹುಂಡಿಗೆ ಕನ್ನ ಹಾಕಿದ್ದ ಆರೋಪಿಗಳನ್ನು ಹರಿಹರ ತಾಲೂಕಿನ ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ.
ಹರಿಹರ ತಾಲೂಕಿನ ಮಲೇಬೆನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಕೊಪ್ಪ ಗ್ರಾಮದ ಶ್ರೀ ದುರುಗಮ್ಮ ದೇವಸ್ಥಾನದ ಹುಂಡಿಯನ್ನು ಕಳೆದ ಜುಲೈ 1ರ ರಾತ್ರಿ ವೇಳೆಯಲ್ಲಿ ಒಡೆದು ಹುಂಡಿಯಲ್ಲಿದ್ದ ಕಾಣಿಕೆ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳ್ಳತನ ಪ್ರಕರಣದ ಆರೋಪಿತರು ಹಾಗೂ ಸ್ವತ್ತಿನ ಪತ್ತೆ ಕಾರ್ಯಾಕ್ಕಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ ಸಂತೋಷ ಮತ್ತು ಜಿ. ಮಂಜುನಾಥ ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ
ಪೊಲೀಸ್ ಉಪಾಧೀಕ್ಷಕ ಬಿ.ಎಸ್ ಬಸವರಾಜ್ ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೇಬೆನ್ನೂರು ಪಿಎಸ್ ಐ ನೇತೃತ್ವದಲ್ಲಿ ಆರೋಪಿತರ ಪತ್ತೆಗಾಗಿ ತಂಡವನ್ನು ರಚಿಸಲಾಗಿತ್ತು.
ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ ಕೆಳಗಿನ ಮನಿ ಮತ್ತು ಸಿಬ್ಬಂದಿಯನ್ನೋಳಗೊಂಡ ತಂಡವು ಆರೋಪಿತರಾದ ಹರಿಹರ ತಾಲೂಕಿನ ಎರೆಬೂದಿಹಾಳು ಗ್ರಾಮದ ಕೂಲಿ ಕಾರ್ಮಿಕ ವೆಂಕಟೇಶ್ ಅಲಿಯಾಸ್ ವೆಂಕಟ (28), ಹೊನ್ನಾಳಿ ತಾಲೂಕಿನ ಬುಳ್ಳಾಪುರ ಗ್ರಾಮದ ಕೂಲಿ ಕಾರ್ಮಿಕ ನಾಗೇಶ್ (28), ದಾವಣಗೆರೆ ತಾಲೂಕಿನ ಲೋಕಿಕೆರೆ ಗ್ರಾಮದ ಹನುಮಂತಪ್ಪ ಅಲಿಯಾಸ್ ಹನುಮಂತರಾಯ (30)ನನ್ನು ಬಂಧಿಸಿದೆ.
ಈ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿದ ಆರೋಪಿತರನ್ನು ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ ಕೆಳಗಿನ ಮನಿ, ಮಹದೇವ ಸಿದ್ದಪ್ಪ, ಸಿಬ್ಬಂದಿಯವರಾದ ವಿನಾಯಕ, ಲಕ್ಷ್ಮಣ, ಶಿವುಕುಮಾರ, ರಾಜಶೇಖರ್, ಪ್ರಶಾಂತ ಕುಮಾರ, ಮಲ್ಲಿಕಾರ್ಜುನ, ಕಡೇಮನಿ ನಾಗಪ್ಪ, ರಾಜಪ್ಪ, ಮುರುಳೀಧರ ತಂಡವು ಭೇದಿಸುವಲ್ಲಿ ಯಶಸ್ವಿಯಾಗಿದೆ. ಈ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳು, ಸಿಬ್ಬಂದಿ ವರ್ಗದವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.