• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಸರಗಳ್ಳತನ ಆರೋಪಿ ಬಂಧನ, 2,80,000 ರೂ. ಮೊತ್ತದ ಸ್ವತ್ತು ವಶ: ಪರಾರಿಯಾದ ಇಬ್ಬರಿಗೆ ಶೋಧ

Editor by Editor
March 17, 2025
in ದಾವಣಗೆರೆ, ಕ್ರೈಂ ನ್ಯೂಸ್
0
ಸರಗಳ್ಳತನ ಆರೋಪಿ ಬಂಧನ, 2,80,000 ರೂ. ಮೊತ್ತದ ಸ್ವತ್ತು ವಶ: ಪರಾರಿಯಾದ ಇಬ್ಬರಿಗೆ ಶೋಧ

SUDDIKSHANA KANNADA NEWS/ DAVANAGERE/ DATE:17-03-2025

ದಾವಣಗೆರೆ: ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಾಯಕೊಂಡ ಪೊಲೀಸರು 2,80 ಸಾವಿರ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ಘಟನೆ ಹಿನ್ನೆಲೆ:

ದಾವಣಗೆರೆ ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿ ಗ್ರಾಮದ ಸುಮಂಗಳಮ್ಮ ಅವರು ಕಳೆದ ಮಾರ್ಚ್ 12ರಂದು ಬೆಳಗ್ಗೆ 6.30 ಸಮಯದಲ್ಲಿ ತಮ್ಮ ಮನೆಯಿಂದ ಕಳವೂರು ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದರು. ಈ ವೇಳೆ ಅವರ ಕೊರಳಿದ್ದ 50 ಗ್ರಾಂ ನ ಬಂಗಾರದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ದೋಚಿದ್ದರು.

ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಸುಮಂಗಳಮ್ಮ ದೂರು ಕೊಟ್ಟಿದ್ದರು.

ಮಾಯಕೊಂಡ ಪಿಎಸ್‌ಐ ಅಜಯ.ಎಸ್. ಬಿ. ಮತ್ತು ಹದಡಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿರವರ ನೇತೃತ್ವದಲ್ಲಿ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿತ್ತು.

ದಾವಣಗೆರೆ ನಗರದ ರಾಮನಗರದ ಆಟೋ ಡ್ರೈವರ್ ರವಿಕಿರಣ (27) ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ಈ ವ್ಯಕ್ತಿಯು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಆರೋಪಿತನಿಂದ ಒಟ್ಟು 50 ಗ್ರಾಂ ತೂಕದ 2 ಲಕ್ಷ ರೂ ಮೊತ್ತದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ ಸುಮಾರು 80,000 ರೂ ಮೌಲ್ಯದ ಹೊಂಡಾ ಶೈನ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ಹಾಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈತನೊಂದಿಗೆ ಪ್ರಕರಣದಲ್ಲಿ ಸಹಚರರಾದ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ತಡಗ ಕಾಲೋನಿಯ ಕೂಲಿ ಕಾರ್ಮಿಕ ರಮೇಶ (47), ಅಜ್ಜಂಪುರ ತಾಲೂಕಿನ ಹಮಾಲಿ ಕೆಲಸಗಾರ ಮನು ಅಲಿಯಾಸ್ ಮನೋಜ (23) ತಪ್ಪಿಸಿಕೊಂಡಿದ್ದು, ಪತ್ತೆಗೆ ಶೋಧ ಮುಂದುವರಿದಿದೆ.

ಆರೋಪಿ ಹಿನ್ನೆಲೆ:

ಮಂಗಳೂರಿನಲ್ಲಿ 5 ಸರಗಳ್ಳತನ ಪ್ರಕರಣಗಳ, ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 1 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.

ಈ ಸರಗಳ್ಳತನ ಪ್ರಕರಣವನ್ನು ಮಾಯಕೊಂಡ ವೃತ್ತ ಕಛೇರಿಯ ಸಿ.ಪಿ.ಐ ನಾಗರಾಜ ಡಿ. ಮಾರ್ಗದರ್ಶನದಲ್ಲಿ ಪಿಎಸ್‌ಐ ಅಜಯ ಎಸ್. ಬಿ. ಮತ್ತು ಹದಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀಶೈಲ ಪಟ್ಟಣಶೆಟ್ಟಿರವರ ನೇತೃತ್ವದಲ್ಲಿ
ಮಾಯಕೊಂಡ ಠಾಣೆಯ ಮತ್ತು ಹದಡಿ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಕರಿಬಸಪ್ಪ ಎಎಸ್‌ಐ, ಲೋಕ್ಯನಾಯ್ಕ, ಅಣ್ಣಯ್ಯ, ಮಾರುತಿ, ರಾಮಕೃಷ್ಣ, ಶ್ರೀನಿವಾಸ, ತಿಮ್ಮೇಶ್, ರಾಜು ಲಮಾಣಿ, ದಾದಪೀರ್ ಚಾಲಕ ದಾದಪೀರ್ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಗಳಾದ ರಾಮಚಂದ್ರ ಜಾಧವ್, ಅರುಣ ಇತರರನ್ನೊಳಗೊಂಡ ತಂಡವು ಸರಗಳ್ಳತನ ಆರೋಪಿತರನ್ನು ಪ್ರಕರಣ ದಾಖಲಾಗಿ ಕೇವಲ 48 ಗಂಟೆಗಳಲ್ಲಿ ಭೇದಿಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪತ್ತೆ ಕಾರ್ಯ ತಂಡವನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಅಭಿನಂದಿಸಿದ್ದಾರೆ.

Next Post
ಮನೆಗಳ್ಳತನ ಪ್ರಕರಣದ ಆರೋಪಿ ಸೆರೆ: 3.15 ಲಕ್ಷ ಮೌಲ್ಯದ ಸ್ವತ್ತು ವಶ

ಮನೆಗಳ್ಳತನ ಪ್ರಕರಣದ ಆರೋಪಿ ಸೆರೆ: 3.15 ಲಕ್ಷ ಮೌಲ್ಯದ ಸ್ವತ್ತು ವಶ

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In