SUDDIKSHANA KANNADA NEWS/DAVANAGERE/DATE:29_12_2025
ದಾವಣಗೆರೆ: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಅನ್ವರ್ ಪಾಷಾ ಹಿನ್ನೆಲೆಯೇ ರೋಚಕ.
ಈ ಸುದ್ದಿಯನ್ನೂ ಓದಿ: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸ್ ನಲ್ಲಿ ಬಿಗ್ ಆಪರೇಷನ್: ಬಂಧಿತರ ಸಂಖ್ಯೆ 8ಕ್ಕೇರಿಕೆ, ಕಾಂಗ್ರೆಸ್ ಘಟಾನುಘಟಿಗಳು ಬಂಧನ!
ಆರಂಭದಲ್ಲಿ ಅಂಥ ಏನೂ ಹೇಳಿಕೊಳ್ಳುವಂತ ಸ್ಥಿತಿವಂತರಲ್ಲ. ಇದ್ದಕ್ಕಿದ್ದಂತೆ ಕೋಟ್ಯಂತರ ರೂಪಾಯಿ ಹಣ ಸಂಪಾದನೆ ಮಾಡಿದ್ದರು. ದಾವಣಗೆರೆಯ ತುರ್ಚಘಟ್ಟದಲ್ಲಿ ಬಂಗಲೆಯಂಥ ಮನೆ ಕಟ್ಟಿಸಿದಾಗಲೇ ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಂತೆ ಯಾವಾಗಲೂ ವರ್ತಿಸುತ್ತಿದ್ದ.
ಅನ್ವರ್ ಪಾಷಾ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ. ಜೊತೆಗೆ ಗುತ್ತಿಗೆದಾರನಾಗಿಯೂ ಗುರುತಿಸಿಕೊಂಡಿದ್ದ. ತುರ್ಚಘಟ್ಟದಲ್ಲಿ ಕಟ್ಟಿದ್ದ ಭವ್ಯ ಭಂಗಲೆಯ ಮನೆ ಗೃಹ ಪ್ರವೇಶಕ್ಕೆ ಸಚಿವ ಜಮೀರ್ ಅಹ್ಮದ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ನ ಗಣ್ಯಾತಿ ಗಣ್ಯರು ಹೋಗಿದ್ದರು. ಇಡೀ ಊರಿಗೆ ಊಟ ಹಾಕಿಸಿ ಗಮನ ಸೆಳೆದಿದ್ದ ಅನ್ವರ್ ಪಾಷಾ ಆದಾಯದ ಮೇಲೆ ಎಲ್ಲರ ಕಣ್ಣಿತ್ತು.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅನ್ವರ್ ಪಾಷಾ ಆಗಾಗ್ಗೆ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ. ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಅಲಿಯಾಸ್ ಜಿ. ಎಸ್. ವೇದಮೂರ್ತಿ ಆಪ್ತ ಬಳಗದಲ್ಲಿ ಒಬ್ಬನಾಗಿದ್ದ. ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಮುಖಂಡರು ಸಿಕ್ಕಿ ಬೀಳುತ್ತಿರುವುದು ಪಕ್ಷಕ್ಕೆ ಹಾಗೂ ನಾಯಕರಿಗೆ ಮುಜುಗರ ತಂದಿದೆ.
ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡು ಕೋಟ್ಯಂತರ ರೂಪಾಯಿ ಹಣ ಸಂಪಾದನೆ ಮಾಡಿರಬಹುದು ಎಂದು ತುರ್ಚಘಟ್ಟದ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಕಮೀಷನ್ ಆಸೆ ದಂಧೆಗೆ ಬಿದ್ದಿದ್ದಾರೆ. ಈ ಹಿಂದಿನಿಂದಲೂ ಕಮೀಷನ್ ದಂಧೆ ನಡೆಸಿಕೊಂಡು ಬರುತ್ತಿದ್ದಾರೆ. ಬೇರೆ ಬೇರೆ ವಿಭಾಗಗಳಲ್ಲಿ ಸಚಿವ ಮಲ್ಲಿಕಾರ್ಜುನ್ ಅವರಿಗೆ ಗೊತ್ತಿಲ್ಲದಂತೆ ಇದುವರೆಗೆ ಕೋಟ್ಯಂತರ ರೂಪಾಯಿ ಬೇರೆ ಬೇರೆ ರೀತಿಯಲ್ಲಿ ಕಮೀಷನ್ ತಿಂದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೇ ಆರೋಪಿಸತೊಡಗಿದ್ದಾರೆ.
ನಗರದ ಜೆ. ಹೆಚ್. ಪಟೇಲ್ ಬಡಾವಣೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ವೇಳೆ ಕಾಂಗ್ರೆಸ್ ಮುಖಂಡ ಶಾಮನೂರು ವೇದಮೂರ್ತಿ ಸೇರಿದಂತೆ ನಾಲ್ವರು ಸಿಕ್ಕಿಬಿದ್ದಿದ್ದರು. ಈಗ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.





Leave a comment